ಹೊನ್ನಾಳಿ: ತಾಲ್ಲೂಕಿನ ಸೊರಟೂರು ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದು, ಮೂರು ಕುರಿಗಳು ಮೃತಪಟ್ಟಿವೆ. ಎರಡು ಹಸುಗಳು ಗಾಯಗೊಂಡಿವೆ.
ರೈತ ಶಾಂತವೀರಪ್ಪಶಿಕಾರಿಪುರ ಮುಖ್ಯರಸ್ತೆಯಲ್ಲಿ ಜಾನುವಾರು ಮೇಯಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಶಿಕಾರಿಪುರದಿಂದ ಹೊನ್ನಾಳಿಗೆ ಬರುತ್ತಿದ್ದ ಇನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಶಾಂತವೀರಪ್ಪ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭಾನುವಾರ ಶಾಂತವೀರಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.