ತಾಲ್ಲೂಕಿನ ಹಟ್ಟಿ ಗ್ರಾಮದ ಇದಾಯತ್ ವುಲ್ಲಾ (19), ರಂಗಪ್ಪ (44) ಮತ್ತು ಮಹಮ್ಮದ್ ಸೈಫುಲ್ಲಾ (47) ಮೃತಪಟ್ಟವರು. ಮೂವರೂ ಗಾರೆ ಕೆಲಸ ಮಾಡುವವರಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಅಜ್ಜಂಪುರ ವಿಠಲಪುರ ಗ್ರಾಮದಲ್ಲಿ ಕೆಲಸ ಮುಗಿಸಿ ಒಂದೇ ಬೈಕಲ್ಲಿ ಬೀರೂರು–ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದರು. ರೋಪದಹಟ್ಟಿ ಕ್ರಾಸ್ ಬಳಿ ಯಾವುದೋ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದಾಯತ್ ಮತ್ತು ರಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಮ್ಮದ್ ಸೈಫುಲ್ಲಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ.