ವಿದ್ಯಾನಗರದ ಬಳಿ ಹೆದ್ದಾರಿ ಜಂಕ್ಷನ್ನಲ್ಲಿ ಟಿಪ್ಪರ್ ಲಾರಿಯನ್ನು ತಿರುಗುಸುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಟಿಪ್ಪರ್ನ ಡೀಸೆಲ್ ಟ್ಯಾಂಕಿಗೆ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಸ್ಥಳೀಯರು ಕಾರಲ್ಲಿದ್ದ ಚಾಲಕನನ್ನು ಹೊರಗೆ ತೆಗೆದಿದ್ದಾರೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿದೆ. ಕಾರಲ್ಲೂ, ಲಾರಿಯಲ್ಲೂ ಚಾಲಕರು ಮಾತ್ರ ಇದ್ದರು.