ಈ ಪಟ್ಟಿಯಿಂದ ಕಾಂಗ್ರೆಸ್ ವಲಯದಲ್ಲಿ ಕೆಲ ಕಾಲ ಗೊಂದಲ ಸೃಷ್ಟಿಯಾಯಿತು. ಸಿಎಂ ಸಿದ್ದರಾಮಯ್ಯ ಅವರು ಈ ಪಟ್ಟಿ ಕುರಿತು ಟ್ವಿಟರ್ನಲ್ಲಿ ಬರೆದುಕೊಂಡಿದ್ದು, ‘ಹರಿದಾಡುತ್ತಿರುವ ಅಭ್ಯರ್ಥಿಗಳ ಪಟ್ಟಿ ನಕಲಿ. ಗೊಂದಲ ಸೃಷ್ಟಿಸಲೆಂದೇ ಅದನ್ನು ಸೃಷ್ಟಿಸಲಾಗಿದೆ. ಎಐಸಿಸಿ ಅಭ್ಯರ್ಥಿಗಳ ಪಟ್ಟಿಗೆ ಇನ್ನೂ ಅನುಮೋದನೆ ನೀಡಿಲ್ಲ. ಫೇಕ್ ನ್ಯೂಸ್ ಫ್ಯಾಕ್ಟರಿಯ ಉತ್ಪನ್ನಗಳನ್ನು ಪ್ರೋತ್ಸಾಹಿಸದಿರಿ’ ಎಂದಿದ್ದಾರೆ.