<p><strong>ದಾವಣಗೆರೆ:</strong> ಕೇಂದ್ರ ಸರ್ಕಾರ ಕೇವಲ ಜಾತಿಯ ಜನಸಂಖ್ಯೆಯನ್ನು ಲೆಕ್ಕಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜೊತೆಗೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಕೇಂದ್ರಕ್ಕಿಂತ ರಾಜ್ಯದ ಜಾತಿ ಗಣತಿ ಭಿನ್ನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>‘ಸಾಮಾಜಿಕ ನ್ಯಾಯಕ್ಕೆ ಜಾತಿಗಳ ಸ್ಥಿತಿ–ಗತಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ಇದಕ್ಕೆ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಗೊತ್ತಾಗಬೇಕು. ಇಲ್ಲವಾದರೆ ಸಾಮಾಜಿಕ ನ್ಯಾಯ ನೀಡುವುದು ಕಷ್ಟ’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ಕೇಂದ್ರ ಸರ್ಕಾರ 2027ರಿಂದ ಜಾತಿ ಗಣತಿ ಶುರು ಮಾಡುವುದಾಗಿ ಹೇಳಿದೆ. ಕೇಂದ್ರದ ಜಾತಿ ಗಣತಿಗೆ ರಾಜ್ಯ ಸರ್ಕಾರದ ತಕರಾರು ಇಲ್ಲ. ಜಾತಿ ಗಣತಿಯ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವುದಾಗಿ ಕೇಂದ್ರ ಸರ್ಕಾರ ಈವರೆಗೆ ಸ್ಪಷ್ಟಪಡಿಸಿಲ್ಲ’ ಎಂದರು.</p><p>‘ಎಚ್.ಕಾಂತರಾಜ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರಬಲ ಮತ್ತು ದುರ್ಬಲ ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಈ ಸಮೀಕ್ಷೆ ನಡೆದು 10 ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ–1995ರ ಕಲಂ 11ರ ಪ್ರಕಾರ 10 ವರ್ಷದ ಬಳಿಕ ಹೊಸ ವರದಿ ತರಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ, ಹೊಸ ಜಾತಿ ಗಣತಿಗೆ ನಿರ್ಧರಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೇಂದ್ರ ಸರ್ಕಾರ ಕೇವಲ ಜಾತಿಯ ಜನಸಂಖ್ಯೆಯನ್ನು ಲೆಕ್ಕಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜೊತೆಗೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಕೇಂದ್ರಕ್ಕಿಂತ ರಾಜ್ಯದ ಜಾತಿ ಗಣತಿ ಭಿನ್ನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>‘ಸಾಮಾಜಿಕ ನ್ಯಾಯಕ್ಕೆ ಜಾತಿಗಳ ಸ್ಥಿತಿ–ಗತಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ಇದಕ್ಕೆ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಗೊತ್ತಾಗಬೇಕು. ಇಲ್ಲವಾದರೆ ಸಾಮಾಜಿಕ ನ್ಯಾಯ ನೀಡುವುದು ಕಷ್ಟ’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ಕೇಂದ್ರ ಸರ್ಕಾರ 2027ರಿಂದ ಜಾತಿ ಗಣತಿ ಶುರು ಮಾಡುವುದಾಗಿ ಹೇಳಿದೆ. ಕೇಂದ್ರದ ಜಾತಿ ಗಣತಿಗೆ ರಾಜ್ಯ ಸರ್ಕಾರದ ತಕರಾರು ಇಲ್ಲ. ಜಾತಿ ಗಣತಿಯ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವುದಾಗಿ ಕೇಂದ್ರ ಸರ್ಕಾರ ಈವರೆಗೆ ಸ್ಪಷ್ಟಪಡಿಸಿಲ್ಲ’ ಎಂದರು.</p><p>‘ಎಚ್.ಕಾಂತರಾಜ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರಬಲ ಮತ್ತು ದುರ್ಬಲ ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಈ ಸಮೀಕ್ಷೆ ನಡೆದು 10 ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ–1995ರ ಕಲಂ 11ರ ಪ್ರಕಾರ 10 ವರ್ಷದ ಬಳಿಕ ಹೊಸ ವರದಿ ತರಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ, ಹೊಸ ಜಾತಿ ಗಣತಿಗೆ ನಿರ್ಧರಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>