ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಪ್ರಮಾಣಪತ್ರ: ಸಮಸ್ಯೆ ಬಗೆಹರಿಸಲು ಯತ್ನ: ಎಂ.ಪಿ. ರೇಣುಕಾಚಾರ್ಯ

ಕುಂಬಾರ ಸಮಾಜದ ಒಗ್ಗಟ್ಟು ಪ್ರದರ್ಶನ, ವಿಚಾರಸಂಕಿರಣ
Last Updated 1 ಫೆಬ್ರುವರಿ 2021, 5:08 IST
ಅಕ್ಷರ ಗಾತ್ರ

ನ್ಯಾಮತಿ: ‘ಕುಂಬಾರ ಸಮುದಾಯ 2 ‘ಎ’ ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಇರುವ ಗೊಂದಲ ಸಮಸ್ಯೆ ಅರಿವು ಇದೆ. ಜಾತಿ ಪ್ರಮಾಣಪತ್ರ ಕೊಡುವಲ್ಲಿ ಆಗಿರುವ ಗೊಂದಲದ ಬಗ್ಗೆ ಅಧಿವೇಶನದಲ್ಲಿ ಮುಖ್ಯಮಂತ್ರಿ, ಅಧಿಕಾರಿಗಳ ಜೊತೆ ಪ್ರಾಮಾಣಿಕವಾಗಿ ಚರ್ಚಿಸುತ್ತೇನೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭರವಸೆ ನೀಡಿದರು.

ಪಟ್ಟಣದಲ್ಲಿ ಭಾನುವಾರ ತಾಲ್ಲೂಕು ಕುಂಬಾರ ಸಮಾಜ, ಕುಂಬಾರ ಯುವಸೈನ್ಯ, ಮಹಿಳಾ ಸಂಘಟನೆ ಹಾಗೂ ಕುಂಭೇಶ್ವರ ಕುಂಬಾರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕುಂಬಾರ ಸಮಾಜದ ಒಗ್ಗಟ್ಟು ಪ್ರದರ್ಶನ, 2 ‘ಎ’ ಜಾತಿ ಪ್ರಮಾಣಪತ್ರದ ಗೊಂದಲ ಪರಿಹಾರ ಕುರಿತ ವಿಚಾರಸಂಕಿರಣ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ತೆಲಸಂಗ ಕುಂಬಾರ ಗುರುಪೀಠದ ಕುಂಬಾರ ಗುಂಡಯ್ಯ ಬಸವ ಶರಣರು, ಚನ್ನಗಿರಿ ಕೇದಾರ ಶಾಖಾಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜದ ಜಿಲ್ಲಾಧ್ಯಕ್ಷ ಕೆ.ಟಿ. ಪ್ರವೀಣಕುಮಾರ, ಕಾರ್ಯಾಧ್ಯಕ್ಷ ರಾಜಶೇಖರ ಕುಂಬಾರ, ಕತ್ತಿಗೆ ಗಂಗಾಧರಪ್ಪ, ಶಂಕರಶೆಟ್ಟಿ, ಹೊಸಮನೆ ಮಲ್ಲಿಕಾರ್ಜುನ, ಉಮಾ ಓಂಕಾರ, ಚೀಲೂರು ರುದ್ರಪ್ಪ, ಕೆ.ಎಸ್. ಮಂಜುನಾಥ, ಉಮಾ ರಮೇಶ, ಶಿವಕುಮಾರ, ಪುಟ್ಟಪ್ಪ, ಸುಧಾ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT