‘ಚುನಾವಣೆ ಸಮಯದಲ್ಲಿ ಮಾತ್ರ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿಯವರು ಎಂಬ ಪದಗಳನ್ನು ಬಳಸಿಕೊಳ್ಳುತ್ತಾರೆ. ‘ಜಾತಿವಾದಿ’ ಎಂದು ಒಬ್ಬರಿಗೊಬ್ಬರು ಆರೋಪಿಸುತ್ತಿದ್ದಾರೆ. ಅವರಿಗೆ ವೋಟು ಬೇಕು ಅಷ್ಟೇ. ಸಿದ್ದರಾಮಯ್ಯ ‘ಅಹಿಂದ’ ನಾಯಕ ಎಂದು ಹೇಳಿ ಹೊರಟರು. ಈಗ ಅವರ ಜೊತೆ ಕುರುಬರು ಬಿಟ್ಟರೆ ಯಾರೂ ಇಲ್ಲ. ಪರಿಶಿಷ್ಟ ಜಾತಿಯವರು ಅವರ ಹತ್ತಿರ ಸುಳಿಯುವುದಿಲ್ಲ’ ಎಂದು ಕುಟುಕಿದ ಈಶ್ವರಪ್ಪ, ‘ನಾವು ರಾಷ್ಟ್ರವಾದಿಗಳು, ರಾಷ್ಟ್ರವಾದವನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ’ ಎಂದರು.