ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಪೈಪ್ಲೈನ್ ಹಾದುಹೋಗುವ ಮಾರ್ಗದ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸುವಂತೆ ಯೋಜನೆ ಮಾರ್ಪಡಿಸುವಂತೆ ಸಲಹೆ ನೀಡಿದರು. ಇದನ್ನು ಸ್ವಾಗತಿಸಿದ ಸಚಿವರು, ಇಲಾಖೆ ಅಧಿಕಾರಿಗಳ ಸಭೆ ಕರೆದು ತಕ್ಷಣ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ನಂತರ ಇಬ್ಬರು ಸದಸ್ಯರು ಪ್ರತಿಭಟನೆ ಕೈಬಿಟ್ಟರು.