<p><strong>ದಾವಣಗೆರೆ:</strong> ನಗರದ ಕೆಲವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿಅನಾಥ ಶವಗಳನ್ನು ಮಾರಾಟ ಮಾಡುವ ದಂಧೆ ಇದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಹೈಕೋರ್ಟ್ನ ಮೊರೆಹೋಗುವುದಾಗಿ ಸಾಮಾಜಿಕ ಕಾರ್ಯಕರ್ತ ಹರೀಶ್ ಹಳ್ಳಿ ಎಚ್ಚರಿಸಿದ್ದಾರೆ.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನಾಥ ಶವಗಳನ್ನು ಅನಾಟಮಿ ಆಕ್ಟ್ 1956ರ ಅನುಸಾರ ವಿಲೇವಾರಿ ಮಾಡದೆ ಕಡತಗಳಲ್ಲಿ ಮಾಹಿತಿ ಸಂಗ್ರಹಿಸದೇ ವೈದ್ಯಕೀಯ ಕಾಲೇಜುಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದ್ದೇನೆ’ ಎಂದು ಆರೋಪಿಸಿದರು.</p>.<p>‘2007ರಿಂದ 2017ರ ಮಧ್ಯೆ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಸ್ಪತ್ರೆಯವರು ವಾರಸುದಾರರಿಲ್ಲದ ಶವದ ಬಗ್ಗೆ ಒಂದೊಂದು ರೀತಿಯ ವರದಿ ನೀಡಿದ್ದಾರೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯವರು 32 ವಾರಸುದಾರರಿಲ್ಲದ ಶವಗಳನ್ನು ಪೊಲೀಸ್ ಇಲಾಖೆಗೆ ನೀಡಲಾಗಿದೆ ಎಂದಿದ್ದಾರೆ. ಆದರೆ ಮಹಾನಗರ ಪಾಲಿಕೆ ಕೇವಲ 4 ಶವದ ಮಾಹಿತಿ ನೀಡಿದರೆ, ಪೊಲೀಸರು 13 ಶವಗಳ ಬಗ್ಗೆ ತಿಳಿಸುತ್ತಿದ್ದಾರೆ.ಇದರಲ್ಲಿ ದೊಡ್ಡ ಮರ್ಮವೇ ಅಡಗಿದೆ’ ಎಂದು ಆರೋಪಿಸಿದರು.</p>.<p>‘ಕೆಲ ಖಾಸಗಿ ವೈದ್ಯಕೀಯ ಕಾಲೇಜುಗಳು ಅಪರಾಧವೆಂದು ಗೊತ್ತಿದ್ದರೂ ಅನಾಟಮಿ ಆಕ್ಟ್ ಕಾಯ್ದೆಯನ್ನು ಉಲ್ಲಂಘಿಸಿರುವುದು ದುರಂತ. ಸತತ 2 ವರ್ಷಗಳಿಂದ ಮಾಹಿತಿ ಹಕ್ಕು ಅಧಿನಿಯಮದಡಿ ಪಡೆದಿರುವ ದಾಖಲೆಗಳಿಂದ ಈ ಎಲ್ಲಾ ಮಾಹಿತಿ ತಿಳಿದುಬಂದಿದ್ದು, ಈ ಬಗ್ಗೆ ಪೂರ್ವವಲಯ ಐಜಿಪಿ ಕಚೇರಿಗೆ ದೂರು ಸಲ್ಲಿಸಲಾಗಿದೆ’ ಎಂದರು.</p>.<p>‘ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ವ್ಯಾಪ್ತಿಗೆ ಒಳಪಡುವ ಇಲಾಖೆಗಳ ಅಧಿಕಾರಿಗಳು ನೀಡಿರುವ ದಾಖಲಾತಿಗಳನ್ನು ವಶಪಡಿಸಿಕೊಂಡು ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಂಡು ಏಳು ದಿವಸದ ಒಳಗೆ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪವನ್ರಾಜ್, ವೀರಾಚಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಗರದ ಕೆಲವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿಅನಾಥ ಶವಗಳನ್ನು ಮಾರಾಟ ಮಾಡುವ ದಂಧೆ ಇದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಹೈಕೋರ್ಟ್ನ ಮೊರೆಹೋಗುವುದಾಗಿ ಸಾಮಾಜಿಕ ಕಾರ್ಯಕರ್ತ ಹರೀಶ್ ಹಳ್ಳಿ ಎಚ್ಚರಿಸಿದ್ದಾರೆ.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನಾಥ ಶವಗಳನ್ನು ಅನಾಟಮಿ ಆಕ್ಟ್ 1956ರ ಅನುಸಾರ ವಿಲೇವಾರಿ ಮಾಡದೆ ಕಡತಗಳಲ್ಲಿ ಮಾಹಿತಿ ಸಂಗ್ರಹಿಸದೇ ವೈದ್ಯಕೀಯ ಕಾಲೇಜುಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದ್ದೇನೆ’ ಎಂದು ಆರೋಪಿಸಿದರು.</p>.<p>‘2007ರಿಂದ 2017ರ ಮಧ್ಯೆ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಸ್ಪತ್ರೆಯವರು ವಾರಸುದಾರರಿಲ್ಲದ ಶವದ ಬಗ್ಗೆ ಒಂದೊಂದು ರೀತಿಯ ವರದಿ ನೀಡಿದ್ದಾರೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯವರು 32 ವಾರಸುದಾರರಿಲ್ಲದ ಶವಗಳನ್ನು ಪೊಲೀಸ್ ಇಲಾಖೆಗೆ ನೀಡಲಾಗಿದೆ ಎಂದಿದ್ದಾರೆ. ಆದರೆ ಮಹಾನಗರ ಪಾಲಿಕೆ ಕೇವಲ 4 ಶವದ ಮಾಹಿತಿ ನೀಡಿದರೆ, ಪೊಲೀಸರು 13 ಶವಗಳ ಬಗ್ಗೆ ತಿಳಿಸುತ್ತಿದ್ದಾರೆ.ಇದರಲ್ಲಿ ದೊಡ್ಡ ಮರ್ಮವೇ ಅಡಗಿದೆ’ ಎಂದು ಆರೋಪಿಸಿದರು.</p>.<p>‘ಕೆಲ ಖಾಸಗಿ ವೈದ್ಯಕೀಯ ಕಾಲೇಜುಗಳು ಅಪರಾಧವೆಂದು ಗೊತ್ತಿದ್ದರೂ ಅನಾಟಮಿ ಆಕ್ಟ್ ಕಾಯ್ದೆಯನ್ನು ಉಲ್ಲಂಘಿಸಿರುವುದು ದುರಂತ. ಸತತ 2 ವರ್ಷಗಳಿಂದ ಮಾಹಿತಿ ಹಕ್ಕು ಅಧಿನಿಯಮದಡಿ ಪಡೆದಿರುವ ದಾಖಲೆಗಳಿಂದ ಈ ಎಲ್ಲಾ ಮಾಹಿತಿ ತಿಳಿದುಬಂದಿದ್ದು, ಈ ಬಗ್ಗೆ ಪೂರ್ವವಲಯ ಐಜಿಪಿ ಕಚೇರಿಗೆ ದೂರು ಸಲ್ಲಿಸಲಾಗಿದೆ’ ಎಂದರು.</p>.<p>‘ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ವ್ಯಾಪ್ತಿಗೆ ಒಳಪಡುವ ಇಲಾಖೆಗಳ ಅಧಿಕಾರಿಗಳು ನೀಡಿರುವ ದಾಖಲಾತಿಗಳನ್ನು ವಶಪಡಿಸಿಕೊಂಡು ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಂಡು ಏಳು ದಿವಸದ ಒಳಗೆ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪವನ್ರಾಜ್, ವೀರಾಚಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>