ಪೆಟ್ರೋಲ್ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕಸಿದು ಪರಾರಿ
ಚನ್ನಗಿರಿ: ಪೆಟ್ರೋಲ್ ಕೇಳುವ ನೆಪದಲ್ಲಿ ಬಂದ ಕಳ್ಳರು ತಾಲ್ಲೂಕಿನ ಗರಗ ಗ್ರಾಮದಲ್ಲಿ ಒಂಟಿ ಮನೆಯಲ್ಲಿದ್ದ ವೃದ್ಧೆಯಿಂದ 3 ತೊಲ ಬಂಗಾರದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.
ರತ್ನಮ್ಮ ಚಿನ್ನದ ಸರ ಕಳೆದುಕೊಂಡವರು. ರಾತ್ರಿ 8.30ರ ವೇಳೆ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ವೃದ್ಧೆಯ ಬಳಿ ಪೆಟ್ರೋಲ್ ಇದೆಯಾ ಎಂದು ಕೇಳಿದರು. ಆ ಬಳಿಕ ಕುಡಿಯಲು ನೀರು ಕೇಳಿದ್ದಾರೆ. ನೀರು ತರಲೆಂದು ರತ್ನಮ್ಮ ಅವರು ಒಳಗೆ ಹೋಗುತ್ತಿದ್ದಾಗ ಈ ಇಬ್ಬರು ರತ್ನಮ್ಮ ಅವರನ್ನು ಭದ್ರವಾಗಿ ಹಿಡಿದುಕೊಂಡು ಕೊರಳಲ್ಲಿ ಇದ್ದ ₹1.26 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.