ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ. ರಮೇಶ್, ‘ಪೊಲೀಸರು ಶುದ್ಧ ಸುಳ್ಳು ಹೇಳುತ್ತಿದ್ದಾರೆ. ಚಂದ್ರಶೇಖರ್ ಮನೆಯಿಂದ ಹೋಗುವಾಗ ಒಳಉಡುಪು (ಚಡ್ಡಿ) ಇತ್ತು. ಆದರೆ, ಶವ ಸಂಸ್ಕಾರ ಮಾಡುವಾಗ ಒಳಉಡುಪು ಇರಲಿಲ್ಲ. ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. ಕಾರಿನ ಹಿಂಭಾಗದ ಇಂಡಿಕೇಟರ್ ಸಹ ಒಡೆದಿದೆ. ಕೈ ಕಟ್ಟಿದ ಸ್ಥಿತಿಯಲ್ಲಿತ್ತು’ ಎಂದು ದೂರಿದರು.