<p><strong>ಚನ್ನಗಿರಿ:</strong> ‘ಅಡಿಕೆ ನಾಡು’ ಎಂದೇ ಪ್ರಸಿದ್ಧಿ ಪಡೆದಿರುವ ತಾಲ್ಲೂಕಿನಲ್ಲಿ ಇನ್ನೇನು ಮುಂಗಾರು ಹಂಗಾಮು ಆರಂಭವಾಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಧಿಕ ಸಂಖ್ಯೆಯ ರೈತರು ಅಡಿಕೆ ಬೆಳೆಯತ್ತ ವಾಲಿದ್ದು, ಅಡಿಕೆ ಸಸಿಗಳಿಗೆ ಬೇಡಿಕೆ ಹೆಚ್ಚಿದೆ. ಅಂತೆಯೇ ಸಸಿಗಳ ದರವೂ ಏರಿಕೆಯಾಗಿದೆ.</p>.<p>ತಾಲ್ಲೂಕಿನಲ್ಲಿ 54,000 ಹೆಕ್ಟೇರ್ ಕೃಷಿ ಭೂಮಿ ಇದ್ದು, ಇದರಲ್ಲಿ 11,000 ಹೆಕ್ಟೇರ್ನಲ್ಲಿ ಭತ್ತ ಬೆಳೆಯಲಾಗುತ್ತಿದೆ ಎಂಬುದು ಕೃಷಿ ಇಲಾಖೆಯ ಮಾಹಿತಿ. ಕೃಷಿ ಭೂಮಿಯಲ್ಲಿ ಹೊಸದಾಗಿ ಅಡಿಕೆ ತೋಟ ಮಾಡಲು ರೈತರು ಮುಂದಾಗುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ಆಹಾರೋತ್ಪನ್ನಗಳ ಕ್ಷೇತ್ರ ಕಡಿಮೆಯಾಗುತ್ತಿದೆ.</p>.<p>10 ವರ್ಷಗಳ ಹಿಂದೆ 30,000 ಹೆಕ್ಟೇರ್ ಇದ್ದ ಅಡಿಕೆ ಬೆಳೆಯುವ ಪ್ರದೇಶ ಇಂದು 9,000 ಹೆಕ್ಟೇರ್ ಪ್ರದೇಶ ಹೆಚ್ಚಳವಾಗಿದ್ದು, 39,000 ಹೆಕ್ಟೇರ್ ಪ್ರದೇಶಕ್ಕೆ ತಲುಪಿದೆ.</p>.<p>ಮುಂಗಾರು ಆರಂಭವಾಗುತ್ತಿದ್ದಂತೆಯೇ ಅಡಿಕೆ ಸಸಿ ನೆಡುವ ಹಂಗಾಮು ಶುರುವಾಗುತ್ತದೆ. ಹಾಗಾಗಿ ವಾರದಿಂದ ರೈತರು ಅಡಿಕೆ ಸಸಿಗಳನ್ನು ಖರೀದಿಸಿ ಸಂಗ್ರಹಿಸಿಕೊಳ್ಳುತ್ತಿದ್ದಾರೆ.</p>.<p>‘ಒಂದು ಅಡಿಕೆ ಸಸಿ ಕನಿಷ್ಠ ₹ 70ರಿಂದ ಗರಿಷ್ಠ ₹ 100ರವರೆಗೆ ಮಾರಾಟವಾಗುತ್ತಿದೆ. ಈ ದರ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಈಗಾಗಲೇ 1,000 ಸಸಿ ಮಾರಾಟ ಮಾಡಿದ್ದೇವೆ. ಅಡಿಕೆಗೆ ಸಿಗುತ್ತಿರುವ ಉತ್ತಮ ದರದಿಂದಾಗಿ ಹೊಸದಾಗಿ ತೋಟ ಮಾಡಲು ರೈತರು ಮುಂದಾಗುತ್ತಿದ್ದಾರೆ’ ಎನ್ನುತ್ತಾರೆ ಅಡಿಕೆ ಸಸಿ ಮಾರಾಟಗಾರ, ಲಿಂಗದಹಳ್ಳಿ ಗ್ರಾಮದ ಚಂದ್ರಶೇಖರ್.</p>.<p>‘ಪ್ರತಿ ವರ್ಷ 4,000ದಿಂದ 5,000 ಎಕರೆ ಅಡಿಕೆ ಪ್ರದೇಶ ಹೆಚ್ಚಳವಾಗುತ್ತಿದೆ. ಅಡಿಕೆ ಬೆಳೆಯ ಮೇಲಿನ ಮೋಹ ಇದಕ್ಕೆ ಕಾರಣ. ಮುಂದೆ ಆಹಾರಧಾನ್ಯ ಬೆಳೆಯುವ ಪ್ರದೇಶವೇ ಇಲ್ಲದಂತಾಗಬಹುದು’ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀಕಾಂತ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-43-2142790272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ‘ಅಡಿಕೆ ನಾಡು’ ಎಂದೇ ಪ್ರಸಿದ್ಧಿ ಪಡೆದಿರುವ ತಾಲ್ಲೂಕಿನಲ್ಲಿ ಇನ್ನೇನು ಮುಂಗಾರು ಹಂಗಾಮು ಆರಂಭವಾಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಧಿಕ ಸಂಖ್ಯೆಯ ರೈತರು ಅಡಿಕೆ ಬೆಳೆಯತ್ತ ವಾಲಿದ್ದು, ಅಡಿಕೆ ಸಸಿಗಳಿಗೆ ಬೇಡಿಕೆ ಹೆಚ್ಚಿದೆ. ಅಂತೆಯೇ ಸಸಿಗಳ ದರವೂ ಏರಿಕೆಯಾಗಿದೆ.</p>.<p>ತಾಲ್ಲೂಕಿನಲ್ಲಿ 54,000 ಹೆಕ್ಟೇರ್ ಕೃಷಿ ಭೂಮಿ ಇದ್ದು, ಇದರಲ್ಲಿ 11,000 ಹೆಕ್ಟೇರ್ನಲ್ಲಿ ಭತ್ತ ಬೆಳೆಯಲಾಗುತ್ತಿದೆ ಎಂಬುದು ಕೃಷಿ ಇಲಾಖೆಯ ಮಾಹಿತಿ. ಕೃಷಿ ಭೂಮಿಯಲ್ಲಿ ಹೊಸದಾಗಿ ಅಡಿಕೆ ತೋಟ ಮಾಡಲು ರೈತರು ಮುಂದಾಗುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ಆಹಾರೋತ್ಪನ್ನಗಳ ಕ್ಷೇತ್ರ ಕಡಿಮೆಯಾಗುತ್ತಿದೆ.</p>.<p>10 ವರ್ಷಗಳ ಹಿಂದೆ 30,000 ಹೆಕ್ಟೇರ್ ಇದ್ದ ಅಡಿಕೆ ಬೆಳೆಯುವ ಪ್ರದೇಶ ಇಂದು 9,000 ಹೆಕ್ಟೇರ್ ಪ್ರದೇಶ ಹೆಚ್ಚಳವಾಗಿದ್ದು, 39,000 ಹೆಕ್ಟೇರ್ ಪ್ರದೇಶಕ್ಕೆ ತಲುಪಿದೆ.</p>.<p>ಮುಂಗಾರು ಆರಂಭವಾಗುತ್ತಿದ್ದಂತೆಯೇ ಅಡಿಕೆ ಸಸಿ ನೆಡುವ ಹಂಗಾಮು ಶುರುವಾಗುತ್ತದೆ. ಹಾಗಾಗಿ ವಾರದಿಂದ ರೈತರು ಅಡಿಕೆ ಸಸಿಗಳನ್ನು ಖರೀದಿಸಿ ಸಂಗ್ರಹಿಸಿಕೊಳ್ಳುತ್ತಿದ್ದಾರೆ.</p>.<p>‘ಒಂದು ಅಡಿಕೆ ಸಸಿ ಕನಿಷ್ಠ ₹ 70ರಿಂದ ಗರಿಷ್ಠ ₹ 100ರವರೆಗೆ ಮಾರಾಟವಾಗುತ್ತಿದೆ. ಈ ದರ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಈಗಾಗಲೇ 1,000 ಸಸಿ ಮಾರಾಟ ಮಾಡಿದ್ದೇವೆ. ಅಡಿಕೆಗೆ ಸಿಗುತ್ತಿರುವ ಉತ್ತಮ ದರದಿಂದಾಗಿ ಹೊಸದಾಗಿ ತೋಟ ಮಾಡಲು ರೈತರು ಮುಂದಾಗುತ್ತಿದ್ದಾರೆ’ ಎನ್ನುತ್ತಾರೆ ಅಡಿಕೆ ಸಸಿ ಮಾರಾಟಗಾರ, ಲಿಂಗದಹಳ್ಳಿ ಗ್ರಾಮದ ಚಂದ್ರಶೇಖರ್.</p>.<p>‘ಪ್ರತಿ ವರ್ಷ 4,000ದಿಂದ 5,000 ಎಕರೆ ಅಡಿಕೆ ಪ್ರದೇಶ ಹೆಚ್ಚಳವಾಗುತ್ತಿದೆ. ಅಡಿಕೆ ಬೆಳೆಯ ಮೇಲಿನ ಮೋಹ ಇದಕ್ಕೆ ಕಾರಣ. ಮುಂದೆ ಆಹಾರಧಾನ್ಯ ಬೆಳೆಯುವ ಪ್ರದೇಶವೇ ಇಲ್ಲದಂತಾಗಬಹುದು’ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀಕಾಂತ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-43-2142790272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>