<p>ಚನ್ನಗಿರಿ: ಧರ್ಮಸ್ಥಳದ ಹೆಸರು ಕೆಡಿಸಲು ಮುಂದಾಗಿರುವವರ ವಿರುದ್ಧ ಆಗಸ್ಟ್ 29ರಂದು ಬಿಜೆಪಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ತಿಳಿಸಿದರು. </p>.<p>ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಲಾಭ ಪಡೆದುಕೊಳ್ಳಲು ಈ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮದ ಉಳಿವಿಗಾಗಿ ಧರ್ಮಯುದ್ಧವನ್ನು ಮಾಡಲಾಗುತ್ತಿದೆ ಎಂದರು. </p>.<p>‘ಶಬರಿಮಲೆ, ತಿರುಪತಿ ಸೇರಿದಂತೆ ದೇಶದ ಪ್ರಮುಖ ಶ್ರದ್ಧಾಕೇಂದ್ರಗಳ ಹೆಸರನ್ನು ಹಾಳು ಮಾಡಲು ದುಷ್ಟ ಶಕ್ತಿಗಳು ಮುಂದಾಗಿವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು. </p>.<p>ಅಂದು ಗಾಂಧಿ ವೃತ್ತದಿಂದ ಪ್ರಾರಂಭಗೊಳ್ಳುವ ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳು, ರಾಷ್ಟ್ರೀಯ ಹೆದ್ದಾರಿ 13ರ ಮೂಲಕ ಸಾಗಲಿದೆ. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಸ್ವಾಮಿ, ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಕುಬೇಂದ್ರೋಜಿರಾವ್, ಕೆ.ಆರ್. ಜಗದೀಶ್, ಸುರೇಶ್ ದೊಡ್ಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ಧರ್ಮಸ್ಥಳದ ಹೆಸರು ಕೆಡಿಸಲು ಮುಂದಾಗಿರುವವರ ವಿರುದ್ಧ ಆಗಸ್ಟ್ 29ರಂದು ಬಿಜೆಪಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ತಿಳಿಸಿದರು. </p>.<p>ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಲಾಭ ಪಡೆದುಕೊಳ್ಳಲು ಈ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮದ ಉಳಿವಿಗಾಗಿ ಧರ್ಮಯುದ್ಧವನ್ನು ಮಾಡಲಾಗುತ್ತಿದೆ ಎಂದರು. </p>.<p>‘ಶಬರಿಮಲೆ, ತಿರುಪತಿ ಸೇರಿದಂತೆ ದೇಶದ ಪ್ರಮುಖ ಶ್ರದ್ಧಾಕೇಂದ್ರಗಳ ಹೆಸರನ್ನು ಹಾಳು ಮಾಡಲು ದುಷ್ಟ ಶಕ್ತಿಗಳು ಮುಂದಾಗಿವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು. </p>.<p>ಅಂದು ಗಾಂಧಿ ವೃತ್ತದಿಂದ ಪ್ರಾರಂಭಗೊಳ್ಳುವ ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳು, ರಾಷ್ಟ್ರೀಯ ಹೆದ್ದಾರಿ 13ರ ಮೂಲಕ ಸಾಗಲಿದೆ. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಸ್ವಾಮಿ, ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಕುಬೇಂದ್ರೋಜಿರಾವ್, ಕೆ.ಆರ್. ಜಗದೀಶ್, ಸುರೇಶ್ ದೊಡ್ಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>