<p><strong>ಚನ್ನಗಿರಿ</strong>: ‘ಸರ್ಕಾರವು ಹೊಸದಾಗಿ ಜಾರಿಗೆ ತರಲು ಹೊರಟಿರುವ ಕಾವೇರಿ 2.0 ಮತ್ತು 3.0 ತಂತ್ರಾಂಶದಿಂದ ಪತ್ರ ಬರಹಗಾರರ ಭವಿಷ್ಯ ನಾಶವಾಗಲಿದೆ’ ಎಂದು ದೂರಿ ತಾಲ್ಲೂಕು ಪತ್ರ ಬರಹಗಾರರ ಸಂಘದವರು ಪಟ್ಟಣದ ಉಪ ನೋಂದಣಿ ಕಚೇರಿಯ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಈ ತಂತ್ರಾಂಶ ಜಾರಿಗೊಂಡರೆ ಪತ್ರ ಬರಹಗಾರರು ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಲಿದ್ದಾರೆ. ಇದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿ ಪಾಲಾಗಲಿವೆ. ರಾಜ್ಯದಲ್ಲಿ 18,000ಕ್ಕೂ ಹೆಚ್ಚು ಪತ್ರ ಬರಹಗಾರರಿದ್ದು, ಕಚೇರಿಯಲ್ಲಿ ಸಹಾಯಕರು, ಸಿಬ್ಬಂದಿ ಸೇರಿ 1 ಲಕ್ಷದಷ್ಟು ಜನರು ಪತ್ರ ಬರಹವನ್ನೇ ಆಶ್ರಯಿಸಿದ್ದಾರೆ’ ಎಂದು ಹೇಳಿದರು.</p>.<p>‘ಸರ್ಕಾರದ ಹೊಸ ನಿಯಮದಿಂದ ಎಲ್ಲರೂ ನಿರುದ್ಯೋಗಿಗಳಾಗಲಿದ್ದಾರೆ. ಹಾಗಾಗಿ, ಕಾವೇರಿ 2.0 ಮತ್ತು 3.0 ತಂತ್ರಾಂಶವನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಡಿ. 16ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಪತ್ರ ಬರಹಗಾರರ ಮನವಿ ಪುರಸ್ಕರಿಸದೇ, ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ತಿಳಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯು. ಬಸವರಾಜ್, ಕೆ.ಆರ್. ಮಂಜುನಾಥ್, ಹಾಲಪ್ಪ, ಜಯಪ್ಪ, ಶಿವಮೂರ್ತಿ, ನಾಗರಾಜ್, ಶಿವಕುಮಾರ್, ಕೆ.ಪಿ.ಎಂ. ಸ್ವಾಮಿ, ಶ್ರೀಕಾಂತ್ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.</p>.<p>ಪ್ರತಿಭಟನೆ ಆರಂಭಕ್ಕೂ ಮೊದಲು ಶಾಸಕ ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಸರ್ಕಾರವು ಹೊಸದಾಗಿ ಜಾರಿಗೆ ತರಲು ಹೊರಟಿರುವ ಕಾವೇರಿ 2.0 ಮತ್ತು 3.0 ತಂತ್ರಾಂಶದಿಂದ ಪತ್ರ ಬರಹಗಾರರ ಭವಿಷ್ಯ ನಾಶವಾಗಲಿದೆ’ ಎಂದು ದೂರಿ ತಾಲ್ಲೂಕು ಪತ್ರ ಬರಹಗಾರರ ಸಂಘದವರು ಪಟ್ಟಣದ ಉಪ ನೋಂದಣಿ ಕಚೇರಿಯ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಈ ತಂತ್ರಾಂಶ ಜಾರಿಗೊಂಡರೆ ಪತ್ರ ಬರಹಗಾರರು ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಲಿದ್ದಾರೆ. ಇದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿ ಪಾಲಾಗಲಿವೆ. ರಾಜ್ಯದಲ್ಲಿ 18,000ಕ್ಕೂ ಹೆಚ್ಚು ಪತ್ರ ಬರಹಗಾರರಿದ್ದು, ಕಚೇರಿಯಲ್ಲಿ ಸಹಾಯಕರು, ಸಿಬ್ಬಂದಿ ಸೇರಿ 1 ಲಕ್ಷದಷ್ಟು ಜನರು ಪತ್ರ ಬರಹವನ್ನೇ ಆಶ್ರಯಿಸಿದ್ದಾರೆ’ ಎಂದು ಹೇಳಿದರು.</p>.<p>‘ಸರ್ಕಾರದ ಹೊಸ ನಿಯಮದಿಂದ ಎಲ್ಲರೂ ನಿರುದ್ಯೋಗಿಗಳಾಗಲಿದ್ದಾರೆ. ಹಾಗಾಗಿ, ಕಾವೇರಿ 2.0 ಮತ್ತು 3.0 ತಂತ್ರಾಂಶವನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಡಿ. 16ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಪತ್ರ ಬರಹಗಾರರ ಮನವಿ ಪುರಸ್ಕರಿಸದೇ, ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ತಿಳಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯು. ಬಸವರಾಜ್, ಕೆ.ಆರ್. ಮಂಜುನಾಥ್, ಹಾಲಪ್ಪ, ಜಯಪ್ಪ, ಶಿವಮೂರ್ತಿ, ನಾಗರಾಜ್, ಶಿವಕುಮಾರ್, ಕೆ.ಪಿ.ಎಂ. ಸ್ವಾಮಿ, ಶ್ರೀಕಾಂತ್ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.</p>.<p>ಪ್ರತಿಭಟನೆ ಆರಂಭಕ್ಕೂ ಮೊದಲು ಶಾಸಕ ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>