<p><strong>ಚನ್ನಗಿರಿ</strong>: ‘ಕೊಡುಗೈ ದಾನಿ, ವಿದ್ಯಾಕಾಶಿ ನಿರ್ಮಾತೃ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಾವು ವೀರಶೈವ ಮಹಾಸಭಾಕ್ಕೆ ತುಂಬಲಾಗದ ನಷ್ಟವುಂಟು ಮಾಡಿದೆ’ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಎಂ.ಬಿ. ನಾಗರಾಜ್ ಕಾಕನೂರು ತಿಳಿಸಿದರು.</p>.<p>ಪಟ್ಟಣದ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಕಚೇರಿಯಲ್ಲಿ ಸೋಮವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಸಹಸ್ರಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ ಉದ್ಯೋಗದಾತ, ದಾನ ಕೇಳಿದವರಿಗೆ ನಿರಾಶೆ ಮಾಡದೇ ಕೈತುಂಬ ದಾನ ನೀಡಿದ ದಾನವೀರ, ನೇರ ನಡೆ– ನುಡಿಯ ವ್ಯಕ್ತಿತ್ವವನ್ನು ಹೊಂದಿ, ಎಲ್ಲ ಪಕ್ಷದವರ ಜತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡ ಅಪರೂಪದ ರಾಜಕಾರಣಿ, 6 ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾದ ಶಾಮನೂರು ಶಿವಶಂಕರಪ್ಪ ಅವರ ಸಾವು ಇಡೀ ಜಿಲ್ಲೆಗೆ ತುಂಬಲಾಗದ ನಷ್ಟವುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗುವಂತಾಗಲಿ’ ಎಂದರು.</p>.<p>ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಹರೋಸಾಗರ್ ಪ್ರಕಾಶ್, ಕಾರ್ಯದರ್ಶಿ ಎಸ್.ಜೆ. ಕಿರಣ್, ಉಪಾಧ್ಯಕ್ಷ ಬಿ. ರೇವಣಸಿದ್ದಪ್ಪ, ಪ್ರಭು, ಜಗದೀಶ್, ಜವಳಿ ಮಹೇಶ್, ದಿಬ್ಬದಹಳ್ಳಿ ದಿನೇಶ್,ಪುಷ್ಪ ವಾಮದೇವಪ್ಪ, ಶಶಿಕಲಾ ಕಿರಣ್, ಮಹಾದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಕೊಡುಗೈ ದಾನಿ, ವಿದ್ಯಾಕಾಶಿ ನಿರ್ಮಾತೃ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಾವು ವೀರಶೈವ ಮಹಾಸಭಾಕ್ಕೆ ತುಂಬಲಾಗದ ನಷ್ಟವುಂಟು ಮಾಡಿದೆ’ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಎಂ.ಬಿ. ನಾಗರಾಜ್ ಕಾಕನೂರು ತಿಳಿಸಿದರು.</p>.<p>ಪಟ್ಟಣದ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಕಚೇರಿಯಲ್ಲಿ ಸೋಮವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಸಹಸ್ರಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ ಉದ್ಯೋಗದಾತ, ದಾನ ಕೇಳಿದವರಿಗೆ ನಿರಾಶೆ ಮಾಡದೇ ಕೈತುಂಬ ದಾನ ನೀಡಿದ ದಾನವೀರ, ನೇರ ನಡೆ– ನುಡಿಯ ವ್ಯಕ್ತಿತ್ವವನ್ನು ಹೊಂದಿ, ಎಲ್ಲ ಪಕ್ಷದವರ ಜತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡ ಅಪರೂಪದ ರಾಜಕಾರಣಿ, 6 ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾದ ಶಾಮನೂರು ಶಿವಶಂಕರಪ್ಪ ಅವರ ಸಾವು ಇಡೀ ಜಿಲ್ಲೆಗೆ ತುಂಬಲಾಗದ ನಷ್ಟವುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗುವಂತಾಗಲಿ’ ಎಂದರು.</p>.<p>ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಹರೋಸಾಗರ್ ಪ್ರಕಾಶ್, ಕಾರ್ಯದರ್ಶಿ ಎಸ್.ಜೆ. ಕಿರಣ್, ಉಪಾಧ್ಯಕ್ಷ ಬಿ. ರೇವಣಸಿದ್ದಪ್ಪ, ಪ್ರಭು, ಜಗದೀಶ್, ಜವಳಿ ಮಹೇಶ್, ದಿಬ್ಬದಹಳ್ಳಿ ದಿನೇಶ್,ಪುಷ್ಪ ವಾಮದೇವಪ್ಪ, ಶಶಿಕಲಾ ಕಿರಣ್, ಮಹಾದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>