<p>ಚನ್ನಗಿರಿ: ‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ಕ್ಷೇತ್ರದ 44 ಫಲಾನುಭವಿಗಳಿಗೆ ಪೈಪ್, ಮೋಟಾರ್, ಪಂಪ್ ಹಾಗೂ ಇತರೆ ಪರಿಕರಗಳನ್ನು ವಿತರಿಸಲಾಗಿದ್ದು, ರೈತರು ಈ ಪರಿಕರಗಳನ್ನು ಉಪಯೋಗಿಸಿಕೊಂಡು ಬೆಳೆಗಳನ್ನು ಬೆಳೆದು ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು’ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸೋಮವಾರ ಸಣ್ಣ ನೀರಾವರಿ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆ ಅಡಿ ವಿವಿಧ ಪರಿಕರಗಳನ್ನು ವಿತರಿಸಿ ಮಾತನಾಡಿದರು.</p>.<p>‘2025– 26ನೇ ಸಾಲಿನಲ್ಲಿ ಎಸ್ಸಿಪಿ ಯೋಜನೆ ಅಡಿ 18 ಹಾಗೂ ಟಿಎಸ್ಪಿ ಯೋಜನೆ ಅಡಿ 16 ಸೇರಿ ಒಟ್ಟು 44 ಫಲಾನುಭವಿಗಳಿಗೆ ಸರ್ಕಾರದಿಂದ ಕೊಳವೆಬಾವಿ ಕೊರೆಯಿಸಿ ₹ 1.70 ಕೋಟಿ ವೆಚ್ಚದ ಪರಿಕರಗಳನ್ನು ವಿತರಿಸಲಾಗಿದೆ’ ಎಂದು ಹೇಳಿದರು.</p>.<p>ಪುರಸಭೆ ಮಾಜಿ ಸದಸ್ಯರಾದ ಶ್ರೀಕಾಂತ್ ಚವ್ಹಾಣ್, ಸೈಯದ್ ಗೌಸ್ಪೀರ್, ಬಿ.ಆರ್. ಹಾಲೇಶ್, ಮುಖಂಡರಾದ ಅಶೋಕ್, ಬಿ.ಎನ್. ರಾಜು, ಎಂ.ಪಿ. ಗಿರೀಶ್, ಮಧುಕುಮಾರ್, ಜಬೀವುಲ್ಲಾ, ರವಿಕುಮಾರ್, ವಿ.ಎ. ರುದ್ರಮುನಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-43-916110058</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ಕ್ಷೇತ್ರದ 44 ಫಲಾನುಭವಿಗಳಿಗೆ ಪೈಪ್, ಮೋಟಾರ್, ಪಂಪ್ ಹಾಗೂ ಇತರೆ ಪರಿಕರಗಳನ್ನು ವಿತರಿಸಲಾಗಿದ್ದು, ರೈತರು ಈ ಪರಿಕರಗಳನ್ನು ಉಪಯೋಗಿಸಿಕೊಂಡು ಬೆಳೆಗಳನ್ನು ಬೆಳೆದು ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು’ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸೋಮವಾರ ಸಣ್ಣ ನೀರಾವರಿ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆ ಅಡಿ ವಿವಿಧ ಪರಿಕರಗಳನ್ನು ವಿತರಿಸಿ ಮಾತನಾಡಿದರು.</p>.<p>‘2025– 26ನೇ ಸಾಲಿನಲ್ಲಿ ಎಸ್ಸಿಪಿ ಯೋಜನೆ ಅಡಿ 18 ಹಾಗೂ ಟಿಎಸ್ಪಿ ಯೋಜನೆ ಅಡಿ 16 ಸೇರಿ ಒಟ್ಟು 44 ಫಲಾನುಭವಿಗಳಿಗೆ ಸರ್ಕಾರದಿಂದ ಕೊಳವೆಬಾವಿ ಕೊರೆಯಿಸಿ ₹ 1.70 ಕೋಟಿ ವೆಚ್ಚದ ಪರಿಕರಗಳನ್ನು ವಿತರಿಸಲಾಗಿದೆ’ ಎಂದು ಹೇಳಿದರು.</p>.<p>ಪುರಸಭೆ ಮಾಜಿ ಸದಸ್ಯರಾದ ಶ್ರೀಕಾಂತ್ ಚವ್ಹಾಣ್, ಸೈಯದ್ ಗೌಸ್ಪೀರ್, ಬಿ.ಆರ್. ಹಾಲೇಶ್, ಮುಖಂಡರಾದ ಅಶೋಕ್, ಬಿ.ಎನ್. ರಾಜು, ಎಂ.ಪಿ. ಗಿರೀಶ್, ಮಧುಕುಮಾರ್, ಜಬೀವುಲ್ಲಾ, ರವಿಕುಮಾರ್, ವಿ.ಎ. ರುದ್ರಮುನಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-43-916110058</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>