<p><strong>ಚನ್ನಗಿರಿ:</strong> ‘ಪಟ್ಟಣದಲ್ಲಿ 11 ಕೊಳಚೆ ಪ್ರದೇಶಗಳಿದ್ದು, 1,508 ಮನೆಗಳ ಸರ್ವೆ ಕಾರ್ಯ ಮಾಡಲಾಗಿದೆ. ಈ ಪೈಕಿ ಪರಿಶಿಷ್ಟ ಕಾಲೊನಿಯ 41 ಕುಟುಂಬಗಳಿಗೆ ಮನೆಗಳ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದ ಬಾಬು ಜಗಜೀವನ ರಾಂ ಸಮುದಾಯ ಭವನದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಸೋಮವಾರ ಪರಿಶಿಷ್ಟ ಕಾಲೊನಿಯ ನಿವಾಸಿಗಳಿಗೆ ಮನೆಗಳ ಹಕ್ಕುಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘40 ವರ್ಷಗಳಿಂದ ಪರಿಶಿಷ್ಟ ಸಮುದಾಯದ ಜನರು ಈ ಮನೆಗಳಲ್ಲಿ ವಾಸ ಮಾಡುತ್ತಿದ್ದು, ಮನೆಗಳ ಹಕ್ಕುಪತ್ರಗಳನ್ನು ಹೊಂದಿರಲಿಲ್ಲ. ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿಯೇ ಹಕ್ಕುಪತ್ರ ನೀಡುವ ಮೂಲಕ ಮನೆಯ ಯಜಮಾನರನ್ನಾಗಿ ಮಾಡಲಾಗಿದೆ’ ಎದು ಹೇಳಿದರು.</p>.<p>‘ಅದೇ ರೀತಿ ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿ ಈ ಕ್ಷೇತ್ರಕ್ಕೆ 1,092 ಮನೆಗಳು ಮಂಜೂರಾಗಿದ್ದು, ₹ 70 ಕೋಟಿ ವೆಚ್ಚದಲ್ಲಿ 800 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಪೈಕಿ ಈಗಾಗಲೇ 610 ಮನೆಗಳ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಆರಂಭಿಸಲಾಗುವುದು’ ಎಂದರು.</p>.<p>ಪುರಸಭೆ ಸದಸ್ಯರಾದ ಬಿ.ಆರ್. ಹಾಲೇಶ್, ಜಿ. ನಿಂಗಪ್ಪ, ಸೈಯದ್ ಗೌಸ್ ಪೀರ್, ಅಮೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಇಮ್ರಾನ್, ಶ್ರೀಕಾಂತ್ ಚವ್ಹಾಣ್, ತನ್ವೀರ್ ಅಹಮದ್, ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಮಂಜುನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ‘ಪಟ್ಟಣದಲ್ಲಿ 11 ಕೊಳಚೆ ಪ್ರದೇಶಗಳಿದ್ದು, 1,508 ಮನೆಗಳ ಸರ್ವೆ ಕಾರ್ಯ ಮಾಡಲಾಗಿದೆ. ಈ ಪೈಕಿ ಪರಿಶಿಷ್ಟ ಕಾಲೊನಿಯ 41 ಕುಟುಂಬಗಳಿಗೆ ಮನೆಗಳ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದ ಬಾಬು ಜಗಜೀವನ ರಾಂ ಸಮುದಾಯ ಭವನದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಸೋಮವಾರ ಪರಿಶಿಷ್ಟ ಕಾಲೊನಿಯ ನಿವಾಸಿಗಳಿಗೆ ಮನೆಗಳ ಹಕ್ಕುಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘40 ವರ್ಷಗಳಿಂದ ಪರಿಶಿಷ್ಟ ಸಮುದಾಯದ ಜನರು ಈ ಮನೆಗಳಲ್ಲಿ ವಾಸ ಮಾಡುತ್ತಿದ್ದು, ಮನೆಗಳ ಹಕ್ಕುಪತ್ರಗಳನ್ನು ಹೊಂದಿರಲಿಲ್ಲ. ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿಯೇ ಹಕ್ಕುಪತ್ರ ನೀಡುವ ಮೂಲಕ ಮನೆಯ ಯಜಮಾನರನ್ನಾಗಿ ಮಾಡಲಾಗಿದೆ’ ಎದು ಹೇಳಿದರು.</p>.<p>‘ಅದೇ ರೀತಿ ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿ ಈ ಕ್ಷೇತ್ರಕ್ಕೆ 1,092 ಮನೆಗಳು ಮಂಜೂರಾಗಿದ್ದು, ₹ 70 ಕೋಟಿ ವೆಚ್ಚದಲ್ಲಿ 800 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಪೈಕಿ ಈಗಾಗಲೇ 610 ಮನೆಗಳ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಆರಂಭಿಸಲಾಗುವುದು’ ಎಂದರು.</p>.<p>ಪುರಸಭೆ ಸದಸ್ಯರಾದ ಬಿ.ಆರ್. ಹಾಲೇಶ್, ಜಿ. ನಿಂಗಪ್ಪ, ಸೈಯದ್ ಗೌಸ್ ಪೀರ್, ಅಮೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಇಮ್ರಾನ್, ಶ್ರೀಕಾಂತ್ ಚವ್ಹಾಣ್, ತನ್ವೀರ್ ಅಹಮದ್, ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಮಂಜುನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>