<p>ಚನ್ನಗಿರಿ: ತಾಲ್ಲೂಕು ಹಿರೇಮಳಲಿ ಗ್ರಾಮದ ಅರಣ್ಯ ಪ್ರದೇಶ ವ್ಯಾಪ್ತಿಯ ಸರ್ವೇ ನಂ. 37ರಲ್ಲಿ ತಿಂಗಳಿಂದ ಕೆಲವರು ಮಣ್ಣನ್ನು ಅಕ್ರಮವಾಗಿ ಅಗೆದು ಮಾರಾಟ ಮಾಡುತ್ತಿದ್ದರು. ಗ್ರಾಮವು ಮಾವಿನಕಟ್ಟೆ ವಲಯ ಅರಣ್ಯ ಪ್ರದೇಶ ವ್ಯಾಪ್ತಿಗೆ ಸೇರಿದ್ದು, ಇದುವರೆಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೇ ಇರುವುದರಿಂದ ಮಣ್ಣು ಮಾಫಿಯಾದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ ಎಂಬ ಬಗ್ಗೆ ಸಾರ್ವಜನಿಕರು ದೂರಿದ್ದರು.</p>.<p>ಏ. 9ರಂದು ‘ಪ್ರಜಾವಾಣಿ’ಯ ಕುಂದು ಕೊರತೆ ವಿಭಾಗದಲ್ಲಿ ‘ಹಿರೇಮಳಲಿ: ಅಕ್ರಮವಾಗಿ ಮಣ್ಣು ಅಗೆದು ಮಾರಾಟ’ ಶೀರ್ಷಿಕೆಯ ಅಡಿ ಪ್ರಕಟಗೊಂಡಿತ್ತು. ಈ ವಿಷಯದ ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ನಿಯಾಮಾನುಸಾರ ಪರಿಶೀಲಿಸಿ, ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಅತಿ ಜರೂರಾಗಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-1275597407</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ತಾಲ್ಲೂಕು ಹಿರೇಮಳಲಿ ಗ್ರಾಮದ ಅರಣ್ಯ ಪ್ರದೇಶ ವ್ಯಾಪ್ತಿಯ ಸರ್ವೇ ನಂ. 37ರಲ್ಲಿ ತಿಂಗಳಿಂದ ಕೆಲವರು ಮಣ್ಣನ್ನು ಅಕ್ರಮವಾಗಿ ಅಗೆದು ಮಾರಾಟ ಮಾಡುತ್ತಿದ್ದರು. ಗ್ರಾಮವು ಮಾವಿನಕಟ್ಟೆ ವಲಯ ಅರಣ್ಯ ಪ್ರದೇಶ ವ್ಯಾಪ್ತಿಗೆ ಸೇರಿದ್ದು, ಇದುವರೆಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೇ ಇರುವುದರಿಂದ ಮಣ್ಣು ಮಾಫಿಯಾದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ ಎಂಬ ಬಗ್ಗೆ ಸಾರ್ವಜನಿಕರು ದೂರಿದ್ದರು.</p>.<p>ಏ. 9ರಂದು ‘ಪ್ರಜಾವಾಣಿ’ಯ ಕುಂದು ಕೊರತೆ ವಿಭಾಗದಲ್ಲಿ ‘ಹಿರೇಮಳಲಿ: ಅಕ್ರಮವಾಗಿ ಮಣ್ಣು ಅಗೆದು ಮಾರಾಟ’ ಶೀರ್ಷಿಕೆಯ ಅಡಿ ಪ್ರಕಟಗೊಂಡಿತ್ತು. ಈ ವಿಷಯದ ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ನಿಯಾಮಾನುಸಾರ ಪರಿಶೀಲಿಸಿ, ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಅತಿ ಜರೂರಾಗಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-1275597407</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>