ಕೊಡಕಿಕೆರೆ ನಿವಾಸಿ, ಕರಿಹಾಲಪ್ಪ (58) ತಮ್ಮ ಹಸುವನ್ನು ಮೇಯಿಸಲು ಗ್ರಾಮದ ಸನಿಹದಲ್ಲಿರುವ ಅರಣ್ಯ ಪ್ರದೇಶಕ್ಕೆ ಹೋಗಿದ್ದರು. ಈ ವೇಳೆ ಪೊದೆಯೊಂದರಲ್ಲಿ ಅಡಗಿ ಕುಳಿತಿದ್ದ ಚಿರತೆಯು ಅವರ ಮೇಲೆ ದಿಢೀರ್ ದಾಳಿ ನಡೆಸಿದೆ. ಇದನ್ನು ಕಂಡು ಓಡಿಬಂದ ಹಸು, ಕೊಂಬಿನಿಂದ ಚಿರತೆಗೆ ತಿವಿದು ಅದನ್ನು ಓಡಿಸಿ ಕರಿಹಾಲಪ್ಪ ಅವರನ್ನು ರಕ್ಷಿಸಿದೆ.