<p><strong>ಚನ್ನಗಿರಿ</strong>: ‘ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ ಅರಿವು ಹಾಗೂ ಡಿಜಿಟಲ್ ಸಾಕ್ಷರತಾ ಕೇಂದ್ರಗಳನ್ನಾಗಿ ಮಾಡಲಾಗಿದೆ. ಅವು ಜ್ಞಾನ ದಾಸೋಹದ ಕೇಂದ್ರಗಳಾಗಿವೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಂಥಾಲಯ ಮೇಲ್ವಿಚಾರಕರ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿರುವ ಎಲ್ಲ ಅರಿವು ಕೇಂದ್ರಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ. ಅನೇಕ ಗ್ರಂಥಾಲಗಳಿಗೆ ಕಂಪ್ಯೂಟರ್, ಯುಪಿಎಸ್, ಪೀಠೋಪಕರಣ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಾದ ನೀಟ್ ಮತ್ತು ಸಿಇಟಿ ಪುಸ್ತಕಗಳನ್ನು ಒದಗಿಸಲಾಗುವುದು ಎಂದರು.</p>.<p>ಅರಿವು ಕೇಂದ್ರಗಳಲ್ಲಿ ಸಂಜೀವಿನಿ ಸಂಘಗಳ ಮಹಿಳೆಯರಿಗೆ ಕಲಿಸುವುದರ ಮೂಲಕ ಅವರನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡಬೇಕು ಎಂದು ಜಿಲ್ಲಾ ಶಿಕ್ಷಣ ಫೌಂಡೇಶನ್ ಸಂಯೋಜಕ ಮಹಾಂತೇಶ್ ಹೇಳಿದರು. </p>.<p>ಗ್ರಂಥಾಲಯ ನಿರ್ವಹಣಾಧಿಕಾರಿ ರಾಜಪ್ಪ, ಸಹಾಯಕ ಅಧಿಕಾರಿ ಹನುಮಂತಪ್ಪ, ಗ್ರಂಥಾಲಯ ಮೇಲ್ವಿಚಾರಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎನ್. ರೇವಣ್ಣ, ಜಿಲ್ಲಾ ಕಾರ್ಯದರ್ಶಿ ಎಚ್.ಎಸ್. ರವಿಕುಮಾರ್, ದಯಾನಂದ್, ಸುಜಾತಾ, ಕನಕ, ಸತೀಶ್, ಮೌನೇಶ್ ಹಾಗೂ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ ಅರಿವು ಹಾಗೂ ಡಿಜಿಟಲ್ ಸಾಕ್ಷರತಾ ಕೇಂದ್ರಗಳನ್ನಾಗಿ ಮಾಡಲಾಗಿದೆ. ಅವು ಜ್ಞಾನ ದಾಸೋಹದ ಕೇಂದ್ರಗಳಾಗಿವೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಂಥಾಲಯ ಮೇಲ್ವಿಚಾರಕರ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿರುವ ಎಲ್ಲ ಅರಿವು ಕೇಂದ್ರಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ. ಅನೇಕ ಗ್ರಂಥಾಲಗಳಿಗೆ ಕಂಪ್ಯೂಟರ್, ಯುಪಿಎಸ್, ಪೀಠೋಪಕರಣ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಾದ ನೀಟ್ ಮತ್ತು ಸಿಇಟಿ ಪುಸ್ತಕಗಳನ್ನು ಒದಗಿಸಲಾಗುವುದು ಎಂದರು.</p>.<p>ಅರಿವು ಕೇಂದ್ರಗಳಲ್ಲಿ ಸಂಜೀವಿನಿ ಸಂಘಗಳ ಮಹಿಳೆಯರಿಗೆ ಕಲಿಸುವುದರ ಮೂಲಕ ಅವರನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡಬೇಕು ಎಂದು ಜಿಲ್ಲಾ ಶಿಕ್ಷಣ ಫೌಂಡೇಶನ್ ಸಂಯೋಜಕ ಮಹಾಂತೇಶ್ ಹೇಳಿದರು. </p>.<p>ಗ್ರಂಥಾಲಯ ನಿರ್ವಹಣಾಧಿಕಾರಿ ರಾಜಪ್ಪ, ಸಹಾಯಕ ಅಧಿಕಾರಿ ಹನುಮಂತಪ್ಪ, ಗ್ರಂಥಾಲಯ ಮೇಲ್ವಿಚಾರಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎನ್. ರೇವಣ್ಣ, ಜಿಲ್ಲಾ ಕಾರ್ಯದರ್ಶಿ ಎಚ್.ಎಸ್. ರವಿಕುಮಾರ್, ದಯಾನಂದ್, ಸುಜಾತಾ, ಕನಕ, ಸತೀಶ್, ಮೌನೇಶ್ ಹಾಗೂ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>