<p><strong>ಚನ್ನಗಿರಿ: ‘</strong>ಅಜ್ಞಾನ, ಸಂಕಟ, ಕಷ್ಟ, ದುಃಖಗಳನ್ನು ನಿವಾರಿಸಿ ನಮ್ಮ ಶ್ರಮವನ್ನು ಹಗುರಗೊಳಿಸಲು ವಿಜ್ಞಾನ ಬಂದಿದೆ. ವಿಜ್ಞಾನ ಮನುಷ್ಯನ ನಿಷ್ಟಾವಂತ ಸೇವಕ. ಇದು ನಮ್ಮ ದೈನಂದಿನ ಬದುಕನ್ನು ಮಾರ್ಪಡಿಸಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ತಿಳಿಸಿದರು.</p>.<p>ಪಟ್ಟಣದ ಮಾರುತಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ತಾಲ್ಲೂಕುಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ವಸ್ತು ಪ್ರದರ್ಶನಗಳು ಪ್ರಮುಖ ಪಾತ್ರ ವಹಿಸುತ್ತದೆ. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹುಟ್ಟುಹಾಕುತ್ತವೆ. ವಿದ್ಯಾರ್ಥಿಗಳ ಆಲೋಚನೆ ಹಾಗೂ ತಾರ್ಕಿಕ ಶಕ್ತಿಯನ್ನು ಹೆಚ್ಚಿಸುತ್ತವೆ’ ಎಂದರು.</p>.<p>ಮಾರುತಿ ಪ್ರೌಢಶಾಲೆ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ರಾಜಪ್ಪ, ಮುಖ್ಯಶಿಕ್ಷಕ ಎಂ.ಆರ್. ಸಂತೋಷ್ ಕುಮಾರ್, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ಸ್ವಾಮಿ, ಬಿಆರ್ಸಿ ಎಸ್.ಶಂಕರಪ್ಪ, ವಿಜ್ಞಾನ ನೋಡಲ್ ಅಧಿಕಾರಿ ಬಿ.ಎಂ.ಪರಮೇಶ್ವರಪ್ಪ, ಶಿಕ್ಷಣ ಸಂಯೋಜಕಿ ಎಂ.ರಶ್ಮಿ, ಶಿಕ್ಷಕರಾದ ಜಿ.ನಾಗರಾಜ್, ಸಿ.ಮಹೇಶ್, ಎನ್.ಜಿ.ಸುರೇಶ್, ಕಲಿವೀರಪ್ಪ, ಆರ್.ಕೃಷ್ಣಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ: ‘</strong>ಅಜ್ಞಾನ, ಸಂಕಟ, ಕಷ್ಟ, ದುಃಖಗಳನ್ನು ನಿವಾರಿಸಿ ನಮ್ಮ ಶ್ರಮವನ್ನು ಹಗುರಗೊಳಿಸಲು ವಿಜ್ಞಾನ ಬಂದಿದೆ. ವಿಜ್ಞಾನ ಮನುಷ್ಯನ ನಿಷ್ಟಾವಂತ ಸೇವಕ. ಇದು ನಮ್ಮ ದೈನಂದಿನ ಬದುಕನ್ನು ಮಾರ್ಪಡಿಸಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ತಿಳಿಸಿದರು.</p>.<p>ಪಟ್ಟಣದ ಮಾರುತಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ತಾಲ್ಲೂಕುಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ವಸ್ತು ಪ್ರದರ್ಶನಗಳು ಪ್ರಮುಖ ಪಾತ್ರ ವಹಿಸುತ್ತದೆ. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹುಟ್ಟುಹಾಕುತ್ತವೆ. ವಿದ್ಯಾರ್ಥಿಗಳ ಆಲೋಚನೆ ಹಾಗೂ ತಾರ್ಕಿಕ ಶಕ್ತಿಯನ್ನು ಹೆಚ್ಚಿಸುತ್ತವೆ’ ಎಂದರು.</p>.<p>ಮಾರುತಿ ಪ್ರೌಢಶಾಲೆ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ರಾಜಪ್ಪ, ಮುಖ್ಯಶಿಕ್ಷಕ ಎಂ.ಆರ್. ಸಂತೋಷ್ ಕುಮಾರ್, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ಸ್ವಾಮಿ, ಬಿಆರ್ಸಿ ಎಸ್.ಶಂಕರಪ್ಪ, ವಿಜ್ಞಾನ ನೋಡಲ್ ಅಧಿಕಾರಿ ಬಿ.ಎಂ.ಪರಮೇಶ್ವರಪ್ಪ, ಶಿಕ್ಷಣ ಸಂಯೋಜಕಿ ಎಂ.ರಶ್ಮಿ, ಶಿಕ್ಷಕರಾದ ಜಿ.ನಾಗರಾಜ್, ಸಿ.ಮಹೇಶ್, ಎನ್.ಜಿ.ಸುರೇಶ್, ಕಲಿವೀರಪ್ಪ, ಆರ್.ಕೃಷ್ಣಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>