<p><strong>ಚನ್ನಗಿರಿ:</strong> ‘ಪರಿಸರ ನಾಶದಿಂದ ಕಾಲ ಕಾಲಕ್ಕೆ ಮಳೆಯಾಗದೇ ರೈತರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಪರಿಸರ ಸಂರಕ್ಷಣೆಗಾಗಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ಕ್ಷೇತ್ರದ ಎಲ್ಲೆಡೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದಲ್ಲಿ ಎನ್ಎಸ್ಯುಐನಿಂದ ಬುಧವಾರ ಹಮ್ಮಿಕೊಂಡಿದ್ದ ಮನೆಗೊಂದು ಮರ, ಊರಿಗೊಂದು ವನ ಅಭಿಯಾನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪಟ್ಟಣದಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ಸಸಿಗಳನ್ನು ವಿತರಿಸಲಾಗಿದೆ. ಶಾಲಾ ಆವರಣ, ಸರ್ಕಾರಿ ಕಚೇರಿ, ರಸ್ತೆ ಬದಿ ಮುಂತಾದ ಕಡೆಗಳಲ್ಲಿ ಸಸಿ ನೆಡಲಾಗುವುದು. ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿಯೂ ಈ ಅಭಿಯಾನದ ಅಡಿಯಲ್ಲಿ ಸಸಿಗಳನ್ನು ನೆಡಲಾಗುವುದು’ ಎಂದು ತಿಳಿಸಿದರು.</p>.<p>ಎನ್ಎಸ್ಯುಐ ರಾಜ್ಯ ಘಟಕದ ಕಾರ್ಯದರ್ಶಿ ಮುಬಷೀರ್ ಅಹಮದ್, ಅನೂಪ್ ಸ್ವಾಮಿ, ಜಫ್ರುಲ್ಲ ಖಾನ್, ಸುಲ್ತಾನ್, ರಾಹುಲ್, ಇಬ್ರಾಹಿಂ, ಶಿವಕುಮಾರ್, ರಫೀಉಲ್ಲಾ, ಪ್ರವೀಣ್, ಮುರುಳಿ, ಪ್ರಜ್ವಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ‘ಪರಿಸರ ನಾಶದಿಂದ ಕಾಲ ಕಾಲಕ್ಕೆ ಮಳೆಯಾಗದೇ ರೈತರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಪರಿಸರ ಸಂರಕ್ಷಣೆಗಾಗಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ಕ್ಷೇತ್ರದ ಎಲ್ಲೆಡೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದಲ್ಲಿ ಎನ್ಎಸ್ಯುಐನಿಂದ ಬುಧವಾರ ಹಮ್ಮಿಕೊಂಡಿದ್ದ ಮನೆಗೊಂದು ಮರ, ಊರಿಗೊಂದು ವನ ಅಭಿಯಾನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪಟ್ಟಣದಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ಸಸಿಗಳನ್ನು ವಿತರಿಸಲಾಗಿದೆ. ಶಾಲಾ ಆವರಣ, ಸರ್ಕಾರಿ ಕಚೇರಿ, ರಸ್ತೆ ಬದಿ ಮುಂತಾದ ಕಡೆಗಳಲ್ಲಿ ಸಸಿ ನೆಡಲಾಗುವುದು. ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿಯೂ ಈ ಅಭಿಯಾನದ ಅಡಿಯಲ್ಲಿ ಸಸಿಗಳನ್ನು ನೆಡಲಾಗುವುದು’ ಎಂದು ತಿಳಿಸಿದರು.</p>.<p>ಎನ್ಎಸ್ಯುಐ ರಾಜ್ಯ ಘಟಕದ ಕಾರ್ಯದರ್ಶಿ ಮುಬಷೀರ್ ಅಹಮದ್, ಅನೂಪ್ ಸ್ವಾಮಿ, ಜಫ್ರುಲ್ಲ ಖಾನ್, ಸುಲ್ತಾನ್, ರಾಹುಲ್, ಇಬ್ರಾಹಿಂ, ಶಿವಕುಮಾರ್, ರಫೀಉಲ್ಲಾ, ಪ್ರವೀಣ್, ಮುರುಳಿ, ಪ್ರಜ್ವಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>