<p>ಮಾನೋಮಟ್ಟಿ (ಚನ್ನಗಿರಿ): ‘ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಅಡಿ ಕ್ಷೇತ್ರದ ಮಾನೋಮಟ್ಟಿ, ಮರವಂಜಿ, ಆಗರಬನ್ನಿಹಟ್ಟಿ ಹಾಗೂ ಹಟ್ಟಿ ಗ್ರಾಮಗಳಲ್ಲಿ 11 ಶಾಲಾ ಕೊಠಡಿಗಳನ್ನು ₹ 1.56 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ತಾಲ್ಲೂಕಿನ ಮಾನೋಮಟ್ಟಿ ಗ್ರಾಮದಲ್ಲಿ ಗುರುವಾರ ನಡೆದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕ್ಷೇತ್ರದಲ್ಲಿ ಆದ್ಯತೆಯ ಮೇರೆಗೆ ಸರ್ಕಾರಿ ಶಾಲೆಗಳಿಗೆ ಕೊಠಡಿ ನಿರ್ಮಿಸಲು ಬದ್ಧನಾಗಿದ್ದೇನೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಹೊಸ ಶಾಲಾ ಕೊಠಡಿಗಳು ನಿರ್ಮಾಣವಾದ ಮೇಲೆ ಆ ಕೊಠಡಿಗಳನ್ನು ಸದ್ಬಳಕೆ ಮಾಡಿಕೊಂಡು ಫಲಿತಾಂಶ ಅಧಿಕಗೊಳಿಸುವ ಕಡೆ ಶಿಕ್ಷಕರು ಗಮನಹರಿಸಬೇಕು’ ಎಂದರು.</p>.<p>‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ₹ 1 ಲಕ್ಷ ನಗದು ಬಹುಮಾನ ನೀಡಲಾಗುವುದು. ಆರ್ಥಿಕವಾಗಿ ಹಿಂದುಳಿದ ಯಾವ ವಿದ್ಯಾರ್ಥಿಗಳೇ ಇರಲಿ ಶೇ 95 ಅಂಕ ಪಡೆದವರಿಗೆ ಅಂತಹವರ ಮುಂದಿನ ವಿದ್ಯಾಭ್ಯಾಸದ ಖರ್ಚನ್ನು ವೈಯಕ್ತಿಕವಾಗಿ ಭರಿಸಲು ಸಿದ್ಧನಿದ್ದೇನೆ. ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಬರಬೇಕೆನ್ನುವುದು ನನ್ನ ಉದ್ದೇಶ’ ಎಂದರು.</p>.<p>ತಿಪ್ಪಣ್ಣ, ಬಸವರಾಜು, ತಿರುವಭೋವಿ, ಗುರುವಭೋವಿ, ಅರುಣ್, ಅಜಯ್, ರುದ್ರೇಶ್, ಬಿಸಿಎಂ ಇಲಾಖೆ ಅಧಿಕಾರಿ ರವೀಂದ್ರ ಕುಮಾರ್ ಅಥರ್ಗಾ, ಬಿಇಒ ಎಲ್. ಜಯಪ್ಪ, ರವಿಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-43-1727395035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನೋಮಟ್ಟಿ (ಚನ್ನಗಿರಿ): ‘ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಅಡಿ ಕ್ಷೇತ್ರದ ಮಾನೋಮಟ್ಟಿ, ಮರವಂಜಿ, ಆಗರಬನ್ನಿಹಟ್ಟಿ ಹಾಗೂ ಹಟ್ಟಿ ಗ್ರಾಮಗಳಲ್ಲಿ 11 ಶಾಲಾ ಕೊಠಡಿಗಳನ್ನು ₹ 1.56 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ತಾಲ್ಲೂಕಿನ ಮಾನೋಮಟ್ಟಿ ಗ್ರಾಮದಲ್ಲಿ ಗುರುವಾರ ನಡೆದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕ್ಷೇತ್ರದಲ್ಲಿ ಆದ್ಯತೆಯ ಮೇರೆಗೆ ಸರ್ಕಾರಿ ಶಾಲೆಗಳಿಗೆ ಕೊಠಡಿ ನಿರ್ಮಿಸಲು ಬದ್ಧನಾಗಿದ್ದೇನೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಹೊಸ ಶಾಲಾ ಕೊಠಡಿಗಳು ನಿರ್ಮಾಣವಾದ ಮೇಲೆ ಆ ಕೊಠಡಿಗಳನ್ನು ಸದ್ಬಳಕೆ ಮಾಡಿಕೊಂಡು ಫಲಿತಾಂಶ ಅಧಿಕಗೊಳಿಸುವ ಕಡೆ ಶಿಕ್ಷಕರು ಗಮನಹರಿಸಬೇಕು’ ಎಂದರು.</p>.<p>‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ₹ 1 ಲಕ್ಷ ನಗದು ಬಹುಮಾನ ನೀಡಲಾಗುವುದು. ಆರ್ಥಿಕವಾಗಿ ಹಿಂದುಳಿದ ಯಾವ ವಿದ್ಯಾರ್ಥಿಗಳೇ ಇರಲಿ ಶೇ 95 ಅಂಕ ಪಡೆದವರಿಗೆ ಅಂತಹವರ ಮುಂದಿನ ವಿದ್ಯಾಭ್ಯಾಸದ ಖರ್ಚನ್ನು ವೈಯಕ್ತಿಕವಾಗಿ ಭರಿಸಲು ಸಿದ್ಧನಿದ್ದೇನೆ. ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಬರಬೇಕೆನ್ನುವುದು ನನ್ನ ಉದ್ದೇಶ’ ಎಂದರು.</p>.<p>ತಿಪ್ಪಣ್ಣ, ಬಸವರಾಜು, ತಿರುವಭೋವಿ, ಗುರುವಭೋವಿ, ಅರುಣ್, ಅಜಯ್, ರುದ್ರೇಶ್, ಬಿಸಿಎಂ ಇಲಾಖೆ ಅಧಿಕಾರಿ ರವೀಂದ್ರ ಕುಮಾರ್ ಅಥರ್ಗಾ, ಬಿಇಒ ಎಲ್. ಜಯಪ್ಪ, ರವಿಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-43-1727395035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>