<p>ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ನಸುಕಿನ 5 ಗಂಟೆಯಿಂದ 8 ಗಂಟೆಯವರೆಗೆ ಜಡಿಮಳೆಯಾಗಿದೆ. ಇದು ರೈತರಲ್ಲಿ ನೆಮ್ಮದಿ ತಂದಿದ್ದು, ಮುಂಗಾರು ಹಂಗಾಮಿನ ಬಿತ್ತನೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ.</p>.<p>ಚನ್ನಗಿರಿಯಲ್ಲಿ 26 ಮಿ.ಮೀ., ದೇವರಹಳ್ಳಿ 18.2, ಕತ್ತಲಗೆರೆ 48, ತ್ಯಾವಣಿಗಿ 14.2, ಬಸವಾಪಟ್ಟಣ 19.9, ಜೋಳದಹಾಳ್ 9.8, ಸಂತೇಬೆನ್ನೂರು 13.4, ಉಬ್ರಾಣಿ 9.4 ಹಾಗೂ ಕೆರೆಬಿಳಚಿ ಗ್ರಾಮದಲ್ಲಿ 16.8 ಮಿ.ಮೀ. ಮಳೆಯಾಗಿದೆ.</p>.<p>ತಾಲ್ಲೂಕಿನಾದ್ಯಂತ ಕಳೆದ ಎರಡು–ಮೂರು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ಅಗತ್ಯವಾದ ರಸಗೊಬ್ಬರವನ್ನು ಖರೀದಿಸಿ ಮನೆಗಳಲ್ಲಿ ಸಂಗ್ರಹ ಮಾಡಿಟ್ಟುಕೊಳ್ಳುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಬಿರುಸುಗೊಳ್ಳುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-43-1480363540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ನಸುಕಿನ 5 ಗಂಟೆಯಿಂದ 8 ಗಂಟೆಯವರೆಗೆ ಜಡಿಮಳೆಯಾಗಿದೆ. ಇದು ರೈತರಲ್ಲಿ ನೆಮ್ಮದಿ ತಂದಿದ್ದು, ಮುಂಗಾರು ಹಂಗಾಮಿನ ಬಿತ್ತನೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ.</p>.<p>ಚನ್ನಗಿರಿಯಲ್ಲಿ 26 ಮಿ.ಮೀ., ದೇವರಹಳ್ಳಿ 18.2, ಕತ್ತಲಗೆರೆ 48, ತ್ಯಾವಣಿಗಿ 14.2, ಬಸವಾಪಟ್ಟಣ 19.9, ಜೋಳದಹಾಳ್ 9.8, ಸಂತೇಬೆನ್ನೂರು 13.4, ಉಬ್ರಾಣಿ 9.4 ಹಾಗೂ ಕೆರೆಬಿಳಚಿ ಗ್ರಾಮದಲ್ಲಿ 16.8 ಮಿ.ಮೀ. ಮಳೆಯಾಗಿದೆ.</p>.<p>ತಾಲ್ಲೂಕಿನಾದ್ಯಂತ ಕಳೆದ ಎರಡು–ಮೂರು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ಅಗತ್ಯವಾದ ರಸಗೊಬ್ಬರವನ್ನು ಖರೀದಿಸಿ ಮನೆಗಳಲ್ಲಿ ಸಂಗ್ರಹ ಮಾಡಿಟ್ಟುಕೊಳ್ಳುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಬಿರುಸುಗೊಳ್ಳುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-43-1480363540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>