<p><strong>ಚನ್ನಗಿರಿ:</strong> ಪಟ್ಟಣದಲ್ಲಿ ಪ್ರತಿ ಶುಕ್ರವಾರ ತಾಲ್ಲೂಕಿನಲ್ಲಿಯೇ ಅತ್ಯಂತ ದೊಡ್ಡ ಸಂತೆ ನಡೆಯುತ್ತದೆ. ಬೇರೆ ಬೇರೆ ಊರಿನ ಜನ ಖರೀದಿಗಾಗಿ ಇಲ್ಲಿಗೆ ಬರುತ್ತಾರೆ. ಆದರೆ ಮಳೆಗಾಲ ಬಂತೆಂದರೆ ಸಾಕು, ಜನರಿಗೆ ಸಂತೆಯ ಚಿಂತೆ ಕಾಡುತ್ತದೆ.</p><p>ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದ್ದರೂ ವ್ಯಾಪಾರಿಗಳು ಅಲ್ಲಿ ವಹಿವಾಟು ನಡೆಸದೆ ಕೆಸರಿನಲ್ಲಿಯೇ ವ್ಯಾಪಾರ ನಡೆಸುವಂತಾಗಿದೆ.</p><p>ವಾರದ ಸಂತೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅಂದಾಜು 5 ಸಾವಿರಕ್ಕೂ ಹೆಚ್ಚು ಜನರು ಬರುತ್ತಾರೆ. ದಿನಸಿ, ತರಕಾರಿ ಇತರೆ ವಸ್ತುಗಳನ್ನು ಖರೀದಿಸುತ್ತಾರೆ. ಹೀಗಾಗಿ ಜನದಟ್ಟಣೆ ಜಾಸ್ತಿಯಾಗುತ್ತದೆ. ಇದರೊಂದಿಗೆ ಕುರಿ, ಕೋಳಿಗಳ ವ್ಯಾಪಾರವೂ ಜೋರಾಗಿ ನಡೆಯುತ್ತದೆ. ಇದೆಲ್ಲವೂ ನಡೆಯುವುದು ಕೆಸರು ಗದ್ದೆಯಂತಾಗಿರುವ ಜಾಗದಲ್ಲೇ.</p><p>ಪುರಸಭೆ ವ್ಯಾಪ್ತಿಗೆ ಸೇರಿದ 2 ಎಕರೆ ಜಮೀನಿನಲ್ಲಿ ವಾರದ ಸಂತೆ ನಡೆಯುತ್ತಿದ್ದು, ಈಗಾಗಲೇ ಎಪಿಎಂಸಿಯಿಂದ ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಸಂತೆ ಮಾರುಕಟ್ಟೆ ನಿರ್ಮಿಸಲಾಗಿದೆ. ಎರಡು ವರ್ಷಗಳಾದರು ಯಾರೊಬ್ಬರೂ ಈ ಮಾರುಕಟ್ಟೆ ಸ್ಥಳಕ್ಕೆ ಕಾಲಿಟ್ಟಿಲ್ಲ. ಬದಲಿಗೆ ಖಾಲಿ ಜಾಗದಲ್ಲೇ ವ್ಯಾಪಾರ ನಡೆಸುತ್ತಿದ್ದಾರೆ. ಪ್ರತಿವರ್ಷ ವಾರದ ಸಂತೆಯನ್ನು ₹ 10 ಲಕ್ಷಕ್ಕಿಂತಲೂ ಅಧಿಕ ಮೊತ್ತಕ್ಕೆ ಹರಾಜು ಮಾಡಲಾಗುತ್ತದೆ. ಹಾಗಾಗಿ ಈ ವಾರದ ಸಂತೆ ಸ್ಥಳವು ಪುರಸಭೆಗೆ ಪ್ರಮುಖ ಆದಾಯ ತರುವ ಜಾಗವಾಗಿದೆ.</p><p>ಪುರಸಭೆಯವರು ಸುಸಜ್ಜಿತವಾದ ವಾರದ ಸಂತೆ ಮಾರುಕಟ್ಟೆ ನಿರ್ಮಿಸಿದ್ದಾರೆ. ಆದರೆ ಅಲ್ಲಿ ವ್ಯಾಪಾರ ಮಾಡಲು ನಿಗದಿಪಡಿಸಿರುವ ಸ್ಥಳ ಕಿರಿದಾಗಿದೆ. ತರಕಾರಿ ಹಾಗೂ ಇತರೆ ವಸ್ತುಗಳನ್ನು ಇಟ್ಟುಕೊಳ್ಳಲು ಅದು ಸಾಕಾಗುವುದಿಲ್ಲ. ಈ ಕಾರಣದಿಂದಾಗಿ ಸುಸಜ್ಜಿತ ಮಾರುಕಟ್ಟೆಗೆ ಯಾವ ವ್ಯಾಪಾರಿಗಳು ಹೋಗಲು ಮುಂದಾಗುತ್ತಿಲ್ಲ.</p><p>‘ಸಂತೆ ಮಾರುಕಟ್ಟೆಯ ಜಾಗ ಕಿರಿದಾಗಿದೆ. ಅಲ್ಲಿನ ರಸ್ತೆಯಲ್ಲಿ ದ್ವಿಚಕ್ರ ವಾಹನ, ಕಾರು, ಆಟೊಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ. ಸಂತೆಯ ದಿನ ಮಾತ್ರ ವಾಹನಗಳ ಸಂಚಾರ ನಿಷೇಧಿಸಿದರೆ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ’ ಎನ್ನುತ್ತಾರೆ ತರಕಾರಿ ವ್ಯಾಪಾರಿ ದೇವೇಂದ್ರಪ್ಪ.</p>.<p>ಸುಸಜ್ಜಿತ ಮಾರುಕಟ್ಟೆಯಲ್ಲಿ ಸಂತೆ ನಡೆಸಲು ಕ್ರಮ: ಮುಖ್ಯಾಧಿಕಾರಿ</p><p>‘ಸುಸಜ್ಜಿತವಾದ ಸಂತೆ ಮಾರುಕಟ್ಟೆ ಸ್ಥಳದಲ್ಲಿ ಶೌಚಾಲಯ, ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಆದರೂ ವ್ಯಾಪಾರಿಗಳು ಅಲ್ಲಿಗೆ ಹೋಗದೆ ಬಯಲು ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದಾರೆ’ ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ತಿಳಿಸಿದರು.</p><p>‘ಈಗಾಗಲೇ ಅನೇಕ ಬಾರಿ ಸಂತೆ ನಡೆಯುವ ಸ್ಥಳಕ್ಕೆ ಹೋಗಿ ವ್ಯಾಪಾರಿಗಳ ಮನವೊಲಿಸಲಾಗಿದೆ. ಸುಸಜ್ಜಿತ ಮಾರುಕಟ್ಟೆ ಸ್ಥಳದಲ್ಲಿ ವ್ಯಾಪಾರ–ವಹಿವಾಟು ನಡೆಸುವಂತೆ ಹೇಳಲಾಗಿದೆ. ಹೀಗೆ ಸೂಚಿಸಿದಾಗ ಮಾತ್ರ ಆ ಸ್ಥಳದಲ್ಲಿ ವ್ಯಾಪಾರ ಮಾಡುತ್ತಾರೆ. ನಾವು ಅಲ್ಲಿಂದ ಮರಳಿದ ಮೇಲೆ ಬಯಲು ಪ್ರದೇಶದಲ್ಲೇ ಯಥಾ ಪ್ರಕಾರ ವ್ಯಾಪಾರ ಮುಂದುವರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸುಸಜ್ಜಿತ ಸಂತೆ ಮಾರುಕಟ್ಟೆ ಸ್ಥಳದಲ್ಲಿಯೇ ಸಂತೆ ನಡೆಸುವಂತೆ ಸೂಚಿಸಲಾಗುತ್ತದೆ. ಈ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಪಟ್ಟಣದಲ್ಲಿ ಪ್ರತಿ ಶುಕ್ರವಾರ ತಾಲ್ಲೂಕಿನಲ್ಲಿಯೇ ಅತ್ಯಂತ ದೊಡ್ಡ ಸಂತೆ ನಡೆಯುತ್ತದೆ. ಬೇರೆ ಬೇರೆ ಊರಿನ ಜನ ಖರೀದಿಗಾಗಿ ಇಲ್ಲಿಗೆ ಬರುತ್ತಾರೆ. ಆದರೆ ಮಳೆಗಾಲ ಬಂತೆಂದರೆ ಸಾಕು, ಜನರಿಗೆ ಸಂತೆಯ ಚಿಂತೆ ಕಾಡುತ್ತದೆ.</p><p>ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದ್ದರೂ ವ್ಯಾಪಾರಿಗಳು ಅಲ್ಲಿ ವಹಿವಾಟು ನಡೆಸದೆ ಕೆಸರಿನಲ್ಲಿಯೇ ವ್ಯಾಪಾರ ನಡೆಸುವಂತಾಗಿದೆ.</p><p>ವಾರದ ಸಂತೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅಂದಾಜು 5 ಸಾವಿರಕ್ಕೂ ಹೆಚ್ಚು ಜನರು ಬರುತ್ತಾರೆ. ದಿನಸಿ, ತರಕಾರಿ ಇತರೆ ವಸ್ತುಗಳನ್ನು ಖರೀದಿಸುತ್ತಾರೆ. ಹೀಗಾಗಿ ಜನದಟ್ಟಣೆ ಜಾಸ್ತಿಯಾಗುತ್ತದೆ. ಇದರೊಂದಿಗೆ ಕುರಿ, ಕೋಳಿಗಳ ವ್ಯಾಪಾರವೂ ಜೋರಾಗಿ ನಡೆಯುತ್ತದೆ. ಇದೆಲ್ಲವೂ ನಡೆಯುವುದು ಕೆಸರು ಗದ್ದೆಯಂತಾಗಿರುವ ಜಾಗದಲ್ಲೇ.</p><p>ಪುರಸಭೆ ವ್ಯಾಪ್ತಿಗೆ ಸೇರಿದ 2 ಎಕರೆ ಜಮೀನಿನಲ್ಲಿ ವಾರದ ಸಂತೆ ನಡೆಯುತ್ತಿದ್ದು, ಈಗಾಗಲೇ ಎಪಿಎಂಸಿಯಿಂದ ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಸಂತೆ ಮಾರುಕಟ್ಟೆ ನಿರ್ಮಿಸಲಾಗಿದೆ. ಎರಡು ವರ್ಷಗಳಾದರು ಯಾರೊಬ್ಬರೂ ಈ ಮಾರುಕಟ್ಟೆ ಸ್ಥಳಕ್ಕೆ ಕಾಲಿಟ್ಟಿಲ್ಲ. ಬದಲಿಗೆ ಖಾಲಿ ಜಾಗದಲ್ಲೇ ವ್ಯಾಪಾರ ನಡೆಸುತ್ತಿದ್ದಾರೆ. ಪ್ರತಿವರ್ಷ ವಾರದ ಸಂತೆಯನ್ನು ₹ 10 ಲಕ್ಷಕ್ಕಿಂತಲೂ ಅಧಿಕ ಮೊತ್ತಕ್ಕೆ ಹರಾಜು ಮಾಡಲಾಗುತ್ತದೆ. ಹಾಗಾಗಿ ಈ ವಾರದ ಸಂತೆ ಸ್ಥಳವು ಪುರಸಭೆಗೆ ಪ್ರಮುಖ ಆದಾಯ ತರುವ ಜಾಗವಾಗಿದೆ.</p><p>ಪುರಸಭೆಯವರು ಸುಸಜ್ಜಿತವಾದ ವಾರದ ಸಂತೆ ಮಾರುಕಟ್ಟೆ ನಿರ್ಮಿಸಿದ್ದಾರೆ. ಆದರೆ ಅಲ್ಲಿ ವ್ಯಾಪಾರ ಮಾಡಲು ನಿಗದಿಪಡಿಸಿರುವ ಸ್ಥಳ ಕಿರಿದಾಗಿದೆ. ತರಕಾರಿ ಹಾಗೂ ಇತರೆ ವಸ್ತುಗಳನ್ನು ಇಟ್ಟುಕೊಳ್ಳಲು ಅದು ಸಾಕಾಗುವುದಿಲ್ಲ. ಈ ಕಾರಣದಿಂದಾಗಿ ಸುಸಜ್ಜಿತ ಮಾರುಕಟ್ಟೆಗೆ ಯಾವ ವ್ಯಾಪಾರಿಗಳು ಹೋಗಲು ಮುಂದಾಗುತ್ತಿಲ್ಲ.</p><p>‘ಸಂತೆ ಮಾರುಕಟ್ಟೆಯ ಜಾಗ ಕಿರಿದಾಗಿದೆ. ಅಲ್ಲಿನ ರಸ್ತೆಯಲ್ಲಿ ದ್ವಿಚಕ್ರ ವಾಹನ, ಕಾರು, ಆಟೊಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ. ಸಂತೆಯ ದಿನ ಮಾತ್ರ ವಾಹನಗಳ ಸಂಚಾರ ನಿಷೇಧಿಸಿದರೆ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ’ ಎನ್ನುತ್ತಾರೆ ತರಕಾರಿ ವ್ಯಾಪಾರಿ ದೇವೇಂದ್ರಪ್ಪ.</p>.<p>ಸುಸಜ್ಜಿತ ಮಾರುಕಟ್ಟೆಯಲ್ಲಿ ಸಂತೆ ನಡೆಸಲು ಕ್ರಮ: ಮುಖ್ಯಾಧಿಕಾರಿ</p><p>‘ಸುಸಜ್ಜಿತವಾದ ಸಂತೆ ಮಾರುಕಟ್ಟೆ ಸ್ಥಳದಲ್ಲಿ ಶೌಚಾಲಯ, ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಆದರೂ ವ್ಯಾಪಾರಿಗಳು ಅಲ್ಲಿಗೆ ಹೋಗದೆ ಬಯಲು ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದಾರೆ’ ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ತಿಳಿಸಿದರು.</p><p>‘ಈಗಾಗಲೇ ಅನೇಕ ಬಾರಿ ಸಂತೆ ನಡೆಯುವ ಸ್ಥಳಕ್ಕೆ ಹೋಗಿ ವ್ಯಾಪಾರಿಗಳ ಮನವೊಲಿಸಲಾಗಿದೆ. ಸುಸಜ್ಜಿತ ಮಾರುಕಟ್ಟೆ ಸ್ಥಳದಲ್ಲಿ ವ್ಯಾಪಾರ–ವಹಿವಾಟು ನಡೆಸುವಂತೆ ಹೇಳಲಾಗಿದೆ. ಹೀಗೆ ಸೂಚಿಸಿದಾಗ ಮಾತ್ರ ಆ ಸ್ಥಳದಲ್ಲಿ ವ್ಯಾಪಾರ ಮಾಡುತ್ತಾರೆ. ನಾವು ಅಲ್ಲಿಂದ ಮರಳಿದ ಮೇಲೆ ಬಯಲು ಪ್ರದೇಶದಲ್ಲೇ ಯಥಾ ಪ್ರಕಾರ ವ್ಯಾಪಾರ ಮುಂದುವರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸುಸಜ್ಜಿತ ಸಂತೆ ಮಾರುಕಟ್ಟೆ ಸ್ಥಳದಲ್ಲಿಯೇ ಸಂತೆ ನಡೆಸುವಂತೆ ಸೂಚಿಸಲಾಗುತ್ತದೆ. ಈ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>