<p><strong>ದಾವಣಗೆರೆ: </strong>ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಮನೆಯಲ್ಲಿ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.</p>.<p>‘ಮಧ್ಯಕರ್ನಾಟಕದ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ.ನಾನು ಪ್ರಬಲ ಆಕಾಂಕ್ಷಿಯಲ್ಲ. ರವೀಂದ್ರನಾಥ್ರಂಥ ಹಿರಿಯರು ಇದ್ದಾರೆ. ಜಿಲ್ಲೆಯ ಯಾರಿಗಾದರೂ ಕೊಡಲಿ’ ಎಂದ ಅವರು, ‘ಸಂಪುಟ ವಿಸ್ತರಣೆಗೆ ದಿನ ನಿಗದಿಯಾಗಿಲ್ಲ’ ಎಂದರು.</p>.<p><strong>ಕಾಂಗ್ರೆಸ್ಗೆ ದುಃಖ:</strong> ‘ರೈತರ ಹಿತದೃಷ್ಟಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ. ರೈತರು ಸಂತೋಷವಾಗಿದ್ದಾರೆ. ಕಾಂಗ್ರೆಸ್ಗೆ ಸರ್ಕಾರದ ವಿರುದ್ಧ ಮಾತನಾಡಲು ಬೇರೆ ವಿಷಯವಿಲ್ಲ. ಹಾಗಾಗಿ ಅವರು ದುಃಖದಲ್ಲಿದ್ದಾರೆ. ಅದಕ್ಕಾಗಿ ರೈತರನ್ನು ಎತ್ತಿಕಟ್ಟುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಅಧಿವೇಶನದಲ್ಲಿ ಅಧಿಕೃತವಾಗಿ ಬಿಲ್ ಮಂಡನೆಯಾಗಿ ಪಾಸಾಗಿದೆ. ಒತ್ತಾಯ ಪೂರ್ವಕವಾಗಿ ನಾವು ಬಿಲ್ ಪಾಸ್ ಮಾಡಿಲ್ಲ. ಕಾಂಗ್ರೆಸ್ ಕಾರಣವಿಲ್ಲದೇ ಟೀಕೆ ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಮನೆಯಲ್ಲಿ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.</p>.<p>‘ಮಧ್ಯಕರ್ನಾಟಕದ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ.ನಾನು ಪ್ರಬಲ ಆಕಾಂಕ್ಷಿಯಲ್ಲ. ರವೀಂದ್ರನಾಥ್ರಂಥ ಹಿರಿಯರು ಇದ್ದಾರೆ. ಜಿಲ್ಲೆಯ ಯಾರಿಗಾದರೂ ಕೊಡಲಿ’ ಎಂದ ಅವರು, ‘ಸಂಪುಟ ವಿಸ್ತರಣೆಗೆ ದಿನ ನಿಗದಿಯಾಗಿಲ್ಲ’ ಎಂದರು.</p>.<p><strong>ಕಾಂಗ್ರೆಸ್ಗೆ ದುಃಖ:</strong> ‘ರೈತರ ಹಿತದೃಷ್ಟಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ. ರೈತರು ಸಂತೋಷವಾಗಿದ್ದಾರೆ. ಕಾಂಗ್ರೆಸ್ಗೆ ಸರ್ಕಾರದ ವಿರುದ್ಧ ಮಾತನಾಡಲು ಬೇರೆ ವಿಷಯವಿಲ್ಲ. ಹಾಗಾಗಿ ಅವರು ದುಃಖದಲ್ಲಿದ್ದಾರೆ. ಅದಕ್ಕಾಗಿ ರೈತರನ್ನು ಎತ್ತಿಕಟ್ಟುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಅಧಿವೇಶನದಲ್ಲಿ ಅಧಿಕೃತವಾಗಿ ಬಿಲ್ ಮಂಡನೆಯಾಗಿ ಪಾಸಾಗಿದೆ. ಒತ್ತಾಯ ಪೂರ್ವಕವಾಗಿ ನಾವು ಬಿಲ್ ಪಾಸ್ ಮಾಡಿಲ್ಲ. ಕಾಂಗ್ರೆಸ್ ಕಾರಣವಿಲ್ಲದೇ ಟೀಕೆ ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>