ಮಕ್ಕಳ ಸಹಾಯವಾಣಿ ಕೊಲ್ಯಾಬ್ ಸಂಯೋಜಕ ಕೊಟ್ರೇಶ್ ಟಿ.ಎಂ., ‘ಬಾಲ್ಯವಿವಾಹ, ಭಿಕ್ಷಾಟನೆಗೆ ತಳ್ಳುವುದು, ಬಾಲ ಕಾರ್ಮಿಕ ಪದ್ಧತಿ ಸೇರಿ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಮಕ್ಕಳ ಮೇಲಿನ ದೌರ್ಜನ್ಯ ತಡೆ ಬರಿ ಕಾನೂನಿನಿಂದ ಮಾತ್ರ ಸಾದ್ಯವಿಲ್ಲ. ಕುಟುಂಬ, ಸಮುದಾಯ, ಸರ್ಕಾರ, ವಿವಿಧ ಇಲಾಖೆಗಳು, ಸಂಘಟನೆಗಳು, ಯುವಕ-ಯುವತಿಯರು, ಪಂಚಾಯಿತಿಗಳೂ ಕೈ ಜೋಡಿಸಬೇಕು’ ಎಂದು ಮನವಿ ಮಾಡಿದರು.