ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಪಟ್ಟಣದಲ್ಲಿ ಈಚೆಗೆ ಬೀದಿಬದಿಯ ಅಂಗಡಿಯಲ್ಲಿನ ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾನೆ.
ಸ್ಥಳೀಯ ನೆಹರುನಗರ ಬಡಾವಣೆಯ ನಿವಾಸಿ ಇರ್ಫಾನ್ ಅವರ ಪುತ್ರ ಹಜರತ್ ಬಿಲಾಲ್ (6) ಮೃತ ಬಾಲಕ.
ಮಾರ್ಚ್ 13ರಂದು ಸಂಜೆ ರಂಜಾನ್ ಉಪವಾಸದ ನಂತರ ಜಾಮಿಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದ 19 ಮಕ್ಕಳು ಅಸ್ವಸ್ಥಗೊಂಡಿದ್ದರು. ಆ ಪೈಕಿ ಹಲವು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇನ್ನೂ ಕೆಲವು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.