<p><strong>ಜಗಳೂರು:</strong> ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಎಂದು ಪಟ್ಟಣದ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಆರ್.ಚೇತನ್ ಹೇಳಿದರು.</p>.<p>ತಾಲ್ಲೂಕಿನ ಬಸವನಕೋಟೆ ಗ್ರಾಮದಲ್ಲಿ ಕಾನೂನು ಸೇವಾ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು -ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬಡತನ ಮತ್ತು ರಕ್ತ ಸಂಬಂಧಿಗಳ ಸಂಬಂಧ ಗಟ್ಟಿಗೊಳಿಸುವ ನೆಪವೊಡ್ಡಿ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ವಿವಾಹಕ್ಕೆ ಪಾಲಕರು ಮುಂದಾಗುತ್ತಿದ್ದಾರೆ. ಈ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಶಾಲೆ, ಕಾಲೇಜುಗಳಿಗೆ ತೆರಳುವ ಹದಿಹರೆಯದ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಆರ್ಥಿಕವಾಗಿ ದುರ್ಬಲರಾದವರು ತಾಲ್ಲೂಕು ಮಟ್ಟದ ಕಾನೂನು ಸೇವಾ ಸಮಿತಿಯಿಂದ ಕಾನೂನು ನೆರವು ಪಡೆಯಬಹುದು. ಲೋಕ ಅದಾಲತ್ನಲ್ಲಿ ಸಿವಿಲ್ ವ್ಯಾಜ್ಯಗಳನ್ನು, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಆರ್ಥಿಕ ಹೊರೆಯಿಂದ ಪಾರಾಗಬಹುದು. ಕೋರ್ಟ್ಗೆ ಅನಗತ್ಯ ಅಲೆದಾಟ ತಪ್ಪಿಸಿಕೊಳ್ಳಬಹುದು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮರಿಯಮ್ಮ, ಹಿರಿಯ ವಕೀಲ ವೈ.ಹನುಮಂತಪ್ಪ, ಪಿಡಿಒ ಪರುಶರಾಮ್, ಸದಸ್ಯರಾದ ದೇವರಾಜ್, ಲಲಿತಮ್ಮ, ಮಂಜಮ್ಮ, ಬಿ.ಟಿ. ಬಸವರಾಜ್, ಕೊಟ್ರೇಶ್, ಸಿಡಿಪಿಒ ಮೇಲ್ವಿಚಾರಕಿ ಎಚ್.ವಿ.ಶಾಂತಮ್ಮ, ಪಿಎಸ್ಐ ಓಂಕಾರನಾಯ್ಕ, ಪಿಸಿ ಬಸಪ್ಪ ಹ್ಯಾಳ್ಯ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಎಂದು ಪಟ್ಟಣದ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಆರ್.ಚೇತನ್ ಹೇಳಿದರು.</p>.<p>ತಾಲ್ಲೂಕಿನ ಬಸವನಕೋಟೆ ಗ್ರಾಮದಲ್ಲಿ ಕಾನೂನು ಸೇವಾ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು -ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬಡತನ ಮತ್ತು ರಕ್ತ ಸಂಬಂಧಿಗಳ ಸಂಬಂಧ ಗಟ್ಟಿಗೊಳಿಸುವ ನೆಪವೊಡ್ಡಿ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ವಿವಾಹಕ್ಕೆ ಪಾಲಕರು ಮುಂದಾಗುತ್ತಿದ್ದಾರೆ. ಈ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಶಾಲೆ, ಕಾಲೇಜುಗಳಿಗೆ ತೆರಳುವ ಹದಿಹರೆಯದ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಆರ್ಥಿಕವಾಗಿ ದುರ್ಬಲರಾದವರು ತಾಲ್ಲೂಕು ಮಟ್ಟದ ಕಾನೂನು ಸೇವಾ ಸಮಿತಿಯಿಂದ ಕಾನೂನು ನೆರವು ಪಡೆಯಬಹುದು. ಲೋಕ ಅದಾಲತ್ನಲ್ಲಿ ಸಿವಿಲ್ ವ್ಯಾಜ್ಯಗಳನ್ನು, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಆರ್ಥಿಕ ಹೊರೆಯಿಂದ ಪಾರಾಗಬಹುದು. ಕೋರ್ಟ್ಗೆ ಅನಗತ್ಯ ಅಲೆದಾಟ ತಪ್ಪಿಸಿಕೊಳ್ಳಬಹುದು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮರಿಯಮ್ಮ, ಹಿರಿಯ ವಕೀಲ ವೈ.ಹನುಮಂತಪ್ಪ, ಪಿಡಿಒ ಪರುಶರಾಮ್, ಸದಸ್ಯರಾದ ದೇವರಾಜ್, ಲಲಿತಮ್ಮ, ಮಂಜಮ್ಮ, ಬಿ.ಟಿ. ಬಸವರಾಜ್, ಕೊಟ್ರೇಶ್, ಸಿಡಿಪಿಒ ಮೇಲ್ವಿಚಾರಕಿ ಎಚ್.ವಿ.ಶಾಂತಮ್ಮ, ಪಿಎಸ್ಐ ಓಂಕಾರನಾಯ್ಕ, ಪಿಸಿ ಬಸಪ್ಪ ಹ್ಯಾಳ್ಯ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>