<p><strong>ದಾವಣಗೆರೆ:</strong> ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಸತಿ ನಿಲಯದಲ್ಲಿನ ಅವ್ಯವಸ್ಥೆಯನ್ನು ಕಂಡು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ತಂಡ ಬೇಸರ ಹೊರಹಾಕಿತು. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಎಚ್ಚರಿಕೆ ನೀಡಿತು.</p>.<p>ಆಯೋಗದ ಸದಸ್ಯರಾದ ಕೆ.ಟಿ. ತಿಪ್ಪೇಸ್ವಾಮಿ, ಶಶಿಧರ್ ಕೋಸಂಬೆ ಹಾಗೂ ಶೇಖರಗೌಡ ರಾಮತ್ನಾಳ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು. ಅನೈರ್ಮಲ್ಯ, ಹಾಲು, ಮಾಂಸ ಸೇರಿದಂತೆ ಆಹಾರ ಪದಾರ್ಥವನ್ನು ಎಲ್ಲೆಂದರಲ್ಲಿ ಬಿಸಾಡಿದ್ದು ಕಣ್ಣಿಗೆ ರಾಚಿತು.</p>.<p>‘ಕ್ರೀಡಾ ಹಾಸ್ಟೆಲ್ನ ಅವ್ಯವಸ್ಥೆ ಕಂಡು ಬೇಸರಗೊಂಡಿದ್ದೇವೆ. ನಿಯಮಾನುಸಾರ ಹಣ್ಣು, ಮೊಟ್ಟೆ, ಮಾಂಸಾಹಾರ ಜ್ಯೂಸ್ ನೀಡುತ್ತಿಲ್ಲ ಎಂಬುದು ಖಚಿತವಾಗಿದೆ. ಈ ಕುರಿತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯುತ್ತೇವೆ’ ಎಂದು ಶಶಿಧರ್ ಕೋಸಂಬೆ ಮಾಹಿತಿ ನೀಡಿದರು.</p>.<p>ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರು ಸ್ಕ್ಯಾನಿಂಗ್ಗೆ ಬಹುಹೊತ್ತಿನಿಂದ ಸರತಿ ಸಾಲಿನಲ್ಲಿ ನಿಂತಿದ್ದನ್ನು ಆಯೋಗದ ಸದಸ್ಯರು ಗಮನಿಸಿದರು. 3 ಸ್ಕ್ಯಾನಿಂಗ್ ಯಂತ್ರಗಳನ್ನು ಒಂದೇ ಕೊಠಡಿಯಲ್ಲಿಟ್ಟು ಪಿಸಿಪಿಎನ್ಡಿಟಿ ಕಾಯ್ದೆ ಉಲ್ಲಂಘನೆ ಮಾಡಿರುವುದನ್ನು ಪತ್ತೆಹಚ್ಚಿತು. ದೊಡ್ಡಬಾತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಬಿಸಿಯೂಟಕ್ಕೆ ಪೂರೈಕೆ ಮಾಡಿರುವ ತೊಗರಿ ಬೇಳೆಯನ್ನು ನೋಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಸತಿ ನಿಲಯದಲ್ಲಿನ ಅವ್ಯವಸ್ಥೆಯನ್ನು ಕಂಡು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ತಂಡ ಬೇಸರ ಹೊರಹಾಕಿತು. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಎಚ್ಚರಿಕೆ ನೀಡಿತು.</p>.<p>ಆಯೋಗದ ಸದಸ್ಯರಾದ ಕೆ.ಟಿ. ತಿಪ್ಪೇಸ್ವಾಮಿ, ಶಶಿಧರ್ ಕೋಸಂಬೆ ಹಾಗೂ ಶೇಖರಗೌಡ ರಾಮತ್ನಾಳ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು. ಅನೈರ್ಮಲ್ಯ, ಹಾಲು, ಮಾಂಸ ಸೇರಿದಂತೆ ಆಹಾರ ಪದಾರ್ಥವನ್ನು ಎಲ್ಲೆಂದರಲ್ಲಿ ಬಿಸಾಡಿದ್ದು ಕಣ್ಣಿಗೆ ರಾಚಿತು.</p>.<p>‘ಕ್ರೀಡಾ ಹಾಸ್ಟೆಲ್ನ ಅವ್ಯವಸ್ಥೆ ಕಂಡು ಬೇಸರಗೊಂಡಿದ್ದೇವೆ. ನಿಯಮಾನುಸಾರ ಹಣ್ಣು, ಮೊಟ್ಟೆ, ಮಾಂಸಾಹಾರ ಜ್ಯೂಸ್ ನೀಡುತ್ತಿಲ್ಲ ಎಂಬುದು ಖಚಿತವಾಗಿದೆ. ಈ ಕುರಿತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯುತ್ತೇವೆ’ ಎಂದು ಶಶಿಧರ್ ಕೋಸಂಬೆ ಮಾಹಿತಿ ನೀಡಿದರು.</p>.<p>ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರು ಸ್ಕ್ಯಾನಿಂಗ್ಗೆ ಬಹುಹೊತ್ತಿನಿಂದ ಸರತಿ ಸಾಲಿನಲ್ಲಿ ನಿಂತಿದ್ದನ್ನು ಆಯೋಗದ ಸದಸ್ಯರು ಗಮನಿಸಿದರು. 3 ಸ್ಕ್ಯಾನಿಂಗ್ ಯಂತ್ರಗಳನ್ನು ಒಂದೇ ಕೊಠಡಿಯಲ್ಲಿಟ್ಟು ಪಿಸಿಪಿಎನ್ಡಿಟಿ ಕಾಯ್ದೆ ಉಲ್ಲಂಘನೆ ಮಾಡಿರುವುದನ್ನು ಪತ್ತೆಹಚ್ಚಿತು. ದೊಡ್ಡಬಾತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಬಿಸಿಯೂಟಕ್ಕೆ ಪೂರೈಕೆ ಮಾಡಿರುವ ತೊಗರಿ ಬೇಳೆಯನ್ನು ನೋಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>