<p><strong>ದಾವಣಗೆರೆ: </strong>ಎಂಸಿಸಿ ‘ಬಿ’ ಬ್ಲಾಕ್ನಲ್ಲಿ ಫುಟ್ಪಾತ್ವರೆಗೆ ವಿಸ್ತರಿಸಿದ್ದ ಅಂಗಡಿಗಳನ್ನು, ಫುಟ್ಪಾತ್ ಮೇಲೆ ಕಟ್ಟಿಕೊಂಡಿದ್ದ ಚಾವಣಿಗಳನ್ನು ಮಹಾನಗರ ಪಾಲಿಕೆಯು ಬುಧವಾರ ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.</p>.<p>ಎಂಸಿಸಿ ಬಿ ಬ್ಲಾಕ್ನಲ್ಲಿರುವ ಜೆಜೆಎಂ ಮೆಡಿಕಲ್ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿರುವ 6ನೇ ಮುಖ್ಯರಸ್ತೆಯ ರಾಜಋಷಿ ಭಗೀರಥ ರಸ್ತೆ ಮತ್ತು ಏಳನೇ ಮುಖ್ಯ ರಸ್ತೆಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಜೆಸಿಬಿ ಬಳಸಿ ಆಕ್ರಮಿತ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.</p>.<p>ಫುಟ್ಪಾತ್ ಮೇಲೆ ತಿಂಡಿ ಅಂಗಡಿಗಳು ಇನ್ನಿತರೇ ವ್ಯಾಪಾರ ನಡೆಸುತ್ತಿದೆ. ಇದರಿಂದ ಈ ಭಾಗದಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಈ ಅಂಗಡಿಗಳನ್ನು ತೆರವು ಮಾಡುವಂತೆ ಸ್ಥಳೀಯರು ಮೂರು ತಿಂಗಳ ಹಿಂದೆಯೇ ಮೇಯರ್, ಆಯುಕ್ತರಿಗೆ ಮನವಿ ಮಾಡಿದ್ದರು. ಕೊರೊನಾ ನಿಯಂತ್ರಣಕ್ಕೆ ಬಂದು ಅಂಗಡಿಗಳನ್ನು ಪುನರ್ ಆರಂಭಿಸುವ ವೇಳೆಗೆ ಇವುಗಳನ್ನು ತೆರವುಗೊಳಿಸಬೇಕು ಎಂದು ಪಾಲಿಕೆಯಿಂದ ಸೂಚಿಸಲಾಗಿತ್ತು. ಆದರೆ ಯಾವುದೇ ಅಂಗಡಿಗಳು ತೆರವಾಗಿರಲಿಲ್ಲ.</p>.<p>ಏಳು ಅಂಗಡಿಗಳು ಮತ್ತು ಮಳಿಗೆಗಳ ಚಾವಣಿಗಳನ್ನು ತೆರವು ಮಾಡಲಾಯಿತು. ಅಷ್ಟೇ ಅಲ್ಲದೇ ಫುಟ್ಪಾತ್ನ್ನು ಒತ್ತುವರಿ ಮಾಡಿಕೊಂಡು ಮೆಟ್ಟಲು ಮಾಡಿಕೊಂಡಿದ್ದ ಸ್ಥಳವನ್ನು ಜೆಸಿಬಿ ಯಂತ್ರ ಬಳಸಿ ತೆರವು ನಡೆಯಲಾಯಿತು.</p>.<p>ಪಾಲಿಕೆ ಉಪ ಆಯುಕ್ತ ಡಿ.ಎಸ್. ಚಂದ್ರಶೇಖರ್, ಕಾರ್ಯನಿರ್ವಾಹಕ ಎಂಜಿನಿಯರ್ ಹರ್ಷಿತಾ, ಎಇಇ ಪ್ರದೀಪ್, ಎಂಜಿನಿಯರ್ ಮಧುಸೂದನ್, ಆರ್ಒ ಸುರೇಶ್ ಪಾಟೀಲ್, ಎಆರ್ಒ ವಿನಯ್ ಕುಮಾರ್, ಬಿಲ್ ಕಲಕ್ಟೆರ್ ಗೋವಿಂದರಾಜ್, ಮಂಜುನಾಥ ಅವರೂ ಇದ್ದರು. ಪೊಲೀಸರು ಬಂದೋಬಸ್ತು ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಎಂಸಿಸಿ ‘ಬಿ’ ಬ್ಲಾಕ್ನಲ್ಲಿ ಫುಟ್ಪಾತ್ವರೆಗೆ ವಿಸ್ತರಿಸಿದ್ದ ಅಂಗಡಿಗಳನ್ನು, ಫುಟ್ಪಾತ್ ಮೇಲೆ ಕಟ್ಟಿಕೊಂಡಿದ್ದ ಚಾವಣಿಗಳನ್ನು ಮಹಾನಗರ ಪಾಲಿಕೆಯು ಬುಧವಾರ ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.</p>.<p>ಎಂಸಿಸಿ ಬಿ ಬ್ಲಾಕ್ನಲ್ಲಿರುವ ಜೆಜೆಎಂ ಮೆಡಿಕಲ್ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿರುವ 6ನೇ ಮುಖ್ಯರಸ್ತೆಯ ರಾಜಋಷಿ ಭಗೀರಥ ರಸ್ತೆ ಮತ್ತು ಏಳನೇ ಮುಖ್ಯ ರಸ್ತೆಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಜೆಸಿಬಿ ಬಳಸಿ ಆಕ್ರಮಿತ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.</p>.<p>ಫುಟ್ಪಾತ್ ಮೇಲೆ ತಿಂಡಿ ಅಂಗಡಿಗಳು ಇನ್ನಿತರೇ ವ್ಯಾಪಾರ ನಡೆಸುತ್ತಿದೆ. ಇದರಿಂದ ಈ ಭಾಗದಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಈ ಅಂಗಡಿಗಳನ್ನು ತೆರವು ಮಾಡುವಂತೆ ಸ್ಥಳೀಯರು ಮೂರು ತಿಂಗಳ ಹಿಂದೆಯೇ ಮೇಯರ್, ಆಯುಕ್ತರಿಗೆ ಮನವಿ ಮಾಡಿದ್ದರು. ಕೊರೊನಾ ನಿಯಂತ್ರಣಕ್ಕೆ ಬಂದು ಅಂಗಡಿಗಳನ್ನು ಪುನರ್ ಆರಂಭಿಸುವ ವೇಳೆಗೆ ಇವುಗಳನ್ನು ತೆರವುಗೊಳಿಸಬೇಕು ಎಂದು ಪಾಲಿಕೆಯಿಂದ ಸೂಚಿಸಲಾಗಿತ್ತು. ಆದರೆ ಯಾವುದೇ ಅಂಗಡಿಗಳು ತೆರವಾಗಿರಲಿಲ್ಲ.</p>.<p>ಏಳು ಅಂಗಡಿಗಳು ಮತ್ತು ಮಳಿಗೆಗಳ ಚಾವಣಿಗಳನ್ನು ತೆರವು ಮಾಡಲಾಯಿತು. ಅಷ್ಟೇ ಅಲ್ಲದೇ ಫುಟ್ಪಾತ್ನ್ನು ಒತ್ತುವರಿ ಮಾಡಿಕೊಂಡು ಮೆಟ್ಟಲು ಮಾಡಿಕೊಂಡಿದ್ದ ಸ್ಥಳವನ್ನು ಜೆಸಿಬಿ ಯಂತ್ರ ಬಳಸಿ ತೆರವು ನಡೆಯಲಾಯಿತು.</p>.<p>ಪಾಲಿಕೆ ಉಪ ಆಯುಕ್ತ ಡಿ.ಎಸ್. ಚಂದ್ರಶೇಖರ್, ಕಾರ್ಯನಿರ್ವಾಹಕ ಎಂಜಿನಿಯರ್ ಹರ್ಷಿತಾ, ಎಇಇ ಪ್ರದೀಪ್, ಎಂಜಿನಿಯರ್ ಮಧುಸೂದನ್, ಆರ್ಒ ಸುರೇಶ್ ಪಾಟೀಲ್, ಎಆರ್ಒ ವಿನಯ್ ಕುಮಾರ್, ಬಿಲ್ ಕಲಕ್ಟೆರ್ ಗೋವಿಂದರಾಜ್, ಮಂಜುನಾಥ ಅವರೂ ಇದ್ದರು. ಪೊಲೀಸರು ಬಂದೋಬಸ್ತು ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>