<p><strong>ದಾವಣಗೆರೆ</strong>: ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ಸಂಬಂಧ ಚರ್ಚಿಸಲು ಆಗಸ್ಟ್ 2ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಇಲ್ಲಿನ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುವುದು, ಪ್ರಯೋಗಾಲಯಗಳ ಸ್ಥಾಪನೆಗಳ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಔಷಧಗಳನ್ನು ಒದಗಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಸರ್ಕಾರ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆ ಉದ್ದೇಶದ ಸರ್ಕಾರ ಯಾರಲ್ಲೂ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ. ಹಿಂದಿನ ಸರ್ಕಾರಗಳು ಏನೆಲ್ಲಾ ಮಾಡಿವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.</p>.<p>ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಗಳ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಕೊಲೆಗಡುಕರು ಯಾರೇ ಆಗಿರಲಿ ಅವರನ್ನು ಬಂಧಿಸಲಾಗುವುದು. ಬಿಜೆಪಿಯವರ ಪ್ರತಿಭಟನೆ ಈಗ ಕಡಿಮೆಯಾಗಿದೆ ಎಂದು ಬಿಜೆಪಿಯುವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು.</p>.<p>ಗೃಹ ಸಚಿವರ ನಿವಾಸದ ಬಳಿ ವ್ಯವಸ್ಥೆ ಸರಿಪಡಿಸಲಾಗಿದೆ. ಅಲ್ಲಿ ಭದ್ರತೆಗೆ ನಿಯೋಜಿಸಿದ್ದವರು ಇರಲಿಲ್ಲ. ಹೀಗಾಗಿ ತಾಕೀತು ಮಾಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ಸಂಬಂಧ ಚರ್ಚಿಸಲು ಆಗಸ್ಟ್ 2ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಇಲ್ಲಿನ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುವುದು, ಪ್ರಯೋಗಾಲಯಗಳ ಸ್ಥಾಪನೆಗಳ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಔಷಧಗಳನ್ನು ಒದಗಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಸರ್ಕಾರ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆ ಉದ್ದೇಶದ ಸರ್ಕಾರ ಯಾರಲ್ಲೂ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ. ಹಿಂದಿನ ಸರ್ಕಾರಗಳು ಏನೆಲ್ಲಾ ಮಾಡಿವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.</p>.<p>ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಗಳ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಕೊಲೆಗಡುಕರು ಯಾರೇ ಆಗಿರಲಿ ಅವರನ್ನು ಬಂಧಿಸಲಾಗುವುದು. ಬಿಜೆಪಿಯವರ ಪ್ರತಿಭಟನೆ ಈಗ ಕಡಿಮೆಯಾಗಿದೆ ಎಂದು ಬಿಜೆಪಿಯುವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು.</p>.<p>ಗೃಹ ಸಚಿವರ ನಿವಾಸದ ಬಳಿ ವ್ಯವಸ್ಥೆ ಸರಿಪಡಿಸಲಾಗಿದೆ. ಅಲ್ಲಿ ಭದ್ರತೆಗೆ ನಿಯೋಜಿಸಿದ್ದವರು ಇರಲಿಲ್ಲ. ಹೀಗಾಗಿ ತಾಕೀತು ಮಾಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>