ಅರ್ಹರಿಗೆ ಮೀಸಲಾತಿ–ಪಕ್ಷದ ನಿಲುವು:‘ಮೀಸಲಾತಿ ವರ್ಗೀಕರಣದ ಬಗ್ಗೆ ಈಗಾಗಲೇ ಹೇಳಿಕೆ ಕೊಟ್ಟಿರುವೆ. ಹಿಂದಿನಿಂದಲೂ ಸಮಾಜದಲ್ಲಿ ಶೋಷಣೆ ಒಳಗಾಗಿದ್ದವರಿಗೆ ಸಾಮಾಜಿಕವಾಗಿ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದುವರಿಯಲು ಮೀಸಲಾತಿ ಅಗತ್ಯ. ಸಮಾಜದಲ್ಲಿ ಕೆಳಗೆ ತಳ್ಳಲ್ಪಟ್ಟವರಿನ್ನು ಮೇಲೆತ್ತಲುಸಂವಿಧಾನದಲ್ಲಿ ಮೀಸಲಾತಿ ಜಾರಿಗೆ ತರಲಾಗಿದೆ. ಮೀಸಲಾತಿ ವ್ಯವಸ್ಥೆಯಲ್ಲಿ ಬರುವ 101 ಜಾತಿಗಳಿಗೆ ಅನ್ಯಾಯ ಆಗಬಾರದು. ಅರ್ಹರಿಗೆ ಮೀಸಲಾತಿ ಸೌಲಭ್ಯ ನೀಡಲು ಬಿಜೆಪಿ ಬದ್ಧ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.