<p><strong>ದಾವಣಗೆರೆ:</strong> ಮುಖ್ಯಮಂತ್ರಿ ಬದಲಾವಣೆ ಮಾಡುವ ಪರಿಸ್ಥಿತಿ ನಿರ್ಮಾಣವಾದರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಯಕರಿಗೆ ಅವಕಾಶ ಕಲ್ಪಿಸಬೇಕು. ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಈ ಹುದ್ದೆಗೆ ಪರಿಗಣಿಸಬೇಕು ಎಂದು ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಎನ್. ರುದ್ರಮುನಿ ಒತ್ತಾಯಿಸಿದರು.</p>.<p>‘ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದರು. ಗೃಹ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಪರಿಸ್ಥಿತಿ ಸೃಷ್ಟಿಯಾದರೆ ಜಿ. ಪರಮೇಶ್ವರ ಅವರಿಗೆ ಈ ಅವಕಾಶ ಸಿಗಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಮಾಜಿ ಸಚಿವರಾದ ಬಿ. ಬಸವಲಿಂಗಪ್ಪ, ಕೆ.ಎಚ್. ರಂಗನಾಥ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದೆ. ರಾಜ್ಯದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಯಕರಿಗೆ ಈವರೆಗೆ ಮುಖ್ಯಮಂತ್ರಿ ಗಾದಿ ಸಿಕ್ಕಿಲ್ಲ. ಕಾಂಗ್ರೆಸ್ ಹೈಕಮಾಂಡ್ ಈ ನಿಟ್ಟಿನಲ್ಲಿ ಆಲೋಚನೆ ಮಾಡುವುದು ಒಳಿತು’ ಎಂದು ಮಹಾಸಭಾದ ಗೌರವಾಧ್ಯಕ್ಷ ಎಸ್. ಶೇಖರಪ್ಪ ಒತ್ತಾಯಿಸಿದರು.</p>.<p>‘ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರೂ ಸೇರಿದಂತೆ ಹಿಂದುಳಿದ ವರ್ಗದ ನಾಯಕರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈ ಅವಕಾಶ ಸಿಕ್ಕಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಸಮುದಾಯದ ನಾಯಕರನ್ನು ಪರಿಗಣಿಸದೇ ಇದ್ದರೆ ಹೋರಾಟ ಅನಿವಾರ್ಯ’ ಎಂದು ಎಚ್ಚರಿಕೆ ನೀಡಿದರು.</p>.<p>ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎ.ಡಿ. ಕೊಟ್ರಬಸಪ್ಪ, ಮುಖಂಡರಾದ ಜಯಣ್ಣ, ಟಿ.ಎಸ್. ರಾಮಯ್ಯ, ಸಾರಥಿ ಬಸವರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮುಖ್ಯಮಂತ್ರಿ ಬದಲಾವಣೆ ಮಾಡುವ ಪರಿಸ್ಥಿತಿ ನಿರ್ಮಾಣವಾದರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಯಕರಿಗೆ ಅವಕಾಶ ಕಲ್ಪಿಸಬೇಕು. ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಈ ಹುದ್ದೆಗೆ ಪರಿಗಣಿಸಬೇಕು ಎಂದು ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಎನ್. ರುದ್ರಮುನಿ ಒತ್ತಾಯಿಸಿದರು.</p>.<p>‘ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದರು. ಗೃಹ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಪರಿಸ್ಥಿತಿ ಸೃಷ್ಟಿಯಾದರೆ ಜಿ. ಪರಮೇಶ್ವರ ಅವರಿಗೆ ಈ ಅವಕಾಶ ಸಿಗಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಮಾಜಿ ಸಚಿವರಾದ ಬಿ. ಬಸವಲಿಂಗಪ್ಪ, ಕೆ.ಎಚ್. ರಂಗನಾಥ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದೆ. ರಾಜ್ಯದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಯಕರಿಗೆ ಈವರೆಗೆ ಮುಖ್ಯಮಂತ್ರಿ ಗಾದಿ ಸಿಕ್ಕಿಲ್ಲ. ಕಾಂಗ್ರೆಸ್ ಹೈಕಮಾಂಡ್ ಈ ನಿಟ್ಟಿನಲ್ಲಿ ಆಲೋಚನೆ ಮಾಡುವುದು ಒಳಿತು’ ಎಂದು ಮಹಾಸಭಾದ ಗೌರವಾಧ್ಯಕ್ಷ ಎಸ್. ಶೇಖರಪ್ಪ ಒತ್ತಾಯಿಸಿದರು.</p>.<p>‘ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರೂ ಸೇರಿದಂತೆ ಹಿಂದುಳಿದ ವರ್ಗದ ನಾಯಕರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈ ಅವಕಾಶ ಸಿಕ್ಕಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಸಮುದಾಯದ ನಾಯಕರನ್ನು ಪರಿಗಣಿಸದೇ ಇದ್ದರೆ ಹೋರಾಟ ಅನಿವಾರ್ಯ’ ಎಂದು ಎಚ್ಚರಿಕೆ ನೀಡಿದರು.</p>.<p>ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎ.ಡಿ. ಕೊಟ್ರಬಸಪ್ಪ, ಮುಖಂಡರಾದ ಜಯಣ್ಣ, ಟಿ.ಎಸ್. ರಾಮಯ್ಯ, ಸಾರಥಿ ಬಸವರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>