ಗೋಹತ್ಯೆ ಬಗ್ಗೆ ನಿಲುವು ಪ್ರಕಟಿಸಲಿ: ಇದಕ್ಕೂ ಮೊದಲು ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ‘ಲವ್ ಜಿಹಾದ್ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಯಾರು ಎಲ್ಲಿಗೆ ಹೋಗಿ ಬೇಕಾದರೂ ಮದುವೆ ಮಾಡಿಕೊಳ್ಳಲು ಅವಕಾಶ ಕೊಡುತ್ತೇವೆ; ಎಲ್ಲಿ ಬೇಕಾದರೂ ಗೋಹತ್ಯೆ ಮಾಡಲು ಅವಕಾಶ ನೀಡುತ್ತೇವೆ ಎಂಬ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ಘೋಷಿಸಿ, ಗ್ರಾಮ ಪಂಚಾಯಿತಿ ಚುನಾವಣಾ ಪ್ರಚಾರ ಮಾಡಲಿ’ ಎಂದು ಸವಾಲು ಹಾಕಿದರು.