ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕಾರ್ಯಕ್ರಮಕ್ಕಾಗಿ ಸಿದ್ಧಗೊಳ್ಳುತ್ತಿರುವ ಮೈದಾನದಲ್ಲಿ ನಾಗರಹಾವು ಪ್ರತ್ಯಕ್ಷ

Last Updated 16 ಮಾರ್ಚ್ 2023, 7:29 IST
ಅಕ್ಷರ ಗಾತ್ರ

ದಾವಣಗೆರೆ: ನರೇಂದ್ರಮೋದಿ ಭಾಗವಹಿಸಲಿರುವ ಕಾರ್ಯಕ್ರಮಕ್ಕಾಗಿ ಸಿದ್ಧಗೊಳ್ಳುತ್ತಿರುವ ಮೈದಾನದಲ್ಲಿ ಗುರುವಾರ ಭೂಮಿಪೂಜೆ ಸಂದರ್ಭದಲ್ಲಿ ನಾಗರಹಾವು ಪ್ರತ್ಯಕ್ಷವಾಯಿತು.

ಬಿಜೆಪಿಯ ರಥಯಾತ್ರೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಮಾರ್ಚ್‌ 25ಕ್ಕೆ ನರೇಂದ್ರ ಮೋದಿ ದಾವಣಗೆರೆಗೆ ಬರಲಿದ್ದಾರೆ.

ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಎಂಐಟಿ ಪಕ್ಕದ ನಲ್ವತ್ತು ಎಕರೆ ಜಮೀನನ್ನು ಸಮತಟ್ಟುಗೊಳಿಸಲಾಗಿತ್ತು. ಚಪ್ಪರ ಹಾಕುವ, ವೇದಿಕೆ ತಯಾರಿಸುವ ಕಾರ್ಯಕ್ಕೆ ಭೂಮಿ ಪೂಜೆ ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಭೂಮಿಪೂಜೆಗಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಬರುವ ಕೆಲವೇ ನಿಮಿಷಗಳ ಮೊದಲು ನಾಗರ ಹಾವು ಕಾಣಿಸಿಕೊಂಡಿತು. ಬಿಜೆಪಿ ಕಾರ್ಯಕರ್ತರು ಸ್ವಲ್ಪ ಹೊತ್ತು ಸ್ತಬ್ದಗೊಂಡರು. ಬಳಿಕ ಹಾವು ಮುಂದಕ್ಕೆ ಸಾಗಲು ದಾರಿಮಾಡಿಕೊಟ್ಟರು.

ಗಾಯಗೊಂಡಿದ್ದ ಈ ಹಾವು ನಿಧಾನಕ್ಕೆ ಮುಂದೆ ಹೋಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT