<p><strong>ದಾವಣಗೆರೆ:</strong> ಕಾಂಗ್ರೆಸ್ ಸರ್ಕಾರ ನೀಡಿರುವ ಚೊಂಬು ಜಾಹೀರಾತನ್ನು ವಿರೋಧಿಸಿ ಬಿಜೆಪಿಯು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಏ.22ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.</p>.<p> ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ, ಬರಗಾಲದ ಸಂದರ್ಭ ಪರಿಹಾರ ನೀಡಿಲ್ಲ, ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ ₹6000ಗಳನ್ನು ಬಿಟ್ಟರೆ ಬಿಜೆಪಿ ಸರ್ಕಾರವಿದ್ದಾಗ ನೀಡುತ್ತಿದ್ದ ₹4000ಗಳನ್ನು ರದ್ದು ಮಾಡಿ, ರೈತರಿಗೆ ಚಿಪ್ಪು ನೀಡಿದೆ. ವಿದ್ಯಾರ್ಥಿವೇತನ ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ, ಹಾಲಿನ ಪ್ರೋತ್ಸಾಹ ಧನ ರದ್ದು ಮಾಡಿ ಹಾಲು ಉತ್ಪಾದಕರಿಗೆ, ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ₹11,146 ಕೋಟಿಯನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಪರಿಶಿಷ್ಟರಿಗೆ, ವೃದ್ಧಾಪ್ಯ ವೇತನ ನೀಡದೇ ವೃದ್ಧರ ಕೈಗೂ ಈ ಸರ್ಕಾರ ಚಿಪ್ಪು ನೀಡಿದೆ. ಇದನ್ನು ಖಂಡಿಸಿ ದಾವಣಗೆರೆಯಲ್ಲಿ ಬೃಹತ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>ಬಿಜೆಪಿ ರೈತರು, ಮಹಿಳೆಯರು ಹಾಗೂ ದಲಿತರಿಗೆ ಅಕ್ಷಯ ಪಾತ್ರೆಯನ್ನು ನೀಡಿದರೆ, ಜನರ ಕೈಗೆ ಚಿಪ್ಪು ನೀಡಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ಚಿಪ್ಪು ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು.</p><p>ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಳಿ ತಪ್ಪಿದ್ದು, ಯುವತಿಯರು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯೇ ಸಾಕ್ಷಿ . ಪ್ರೀತಿಸಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತ ಸಮುದಾಯದ ಫಯಾಜ್ ಎಂಬಾತ ಹಾಡುಹಗಲೇ 9 ಬಾರಿ ಚುಚ್ಚಿ ಸಾಯಿಸಿದ್ದಾನೆ. ಆದರೆ ರಾಜ್ಯ ಗೃಹ ಸಚಿವರು ಇದು ವೈಯಕ್ತಿಕ ವಿಷಯ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ. ಉಗ್ರಗಾಮಿಗಳಿಗೆ, ಭಯೋತ್ಪಾದಕರಿಗೆ 'ಮೈಬ್ರದರ್'' ನೀತಿ ಅನುಸರಣೆ ಮಾಡುತ್ತಿರುವುದರಿಂದ ದುಷ್ಕೃತ್ಯಗಳು ಜಾಸ್ತಿಯಾಗಿವೆ ಎಂದು ದೂರಿದರು. </p><p>ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾದ ಮೇಲೆ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ತಿಳಿಸಲಿ. ಸಂಸದರು ದಾವಣಗೆರೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಗೆ ಯತ್ನಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಕಾಲೇಜಿಗೆ ಅಡ್ಡಿ ಆಗುತ್ತದೆ ಎಂದು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.</p><p>ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಹತ್ತು ತಿಂಗಳಲ್ಲಿ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಪ್ರಶ್ನಿಸ ಬೇಕಾಗುತ್ತದೆ. ಅರ್ಧಂಬರ್ಧ ಕುಂದುವಾಡ ಕೆರೆ ಮಾಡಿ ಮಲ್ಲಿಕಾರ್ಜುನ ಸಾಗರ ಎಂದು ಹೆಸರಿಟ್ಟಿದ್ದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಅದನ್ನು ಅಭಿವೃದ್ಧಿಪಡಿಸಿದೆವು ಎಂದು ಹೇಳಿದರು.</p><p>ನಾನು ಭ್ರಷ್ಟಾಚಾರ ಮಾಡಿದ್ದೇನೆ ಎಂದು ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ. ನಾನು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮ ಪಂಚಾಯತಿ ಸದಸ್ಯರಾಗಲೂ ಲಾಯಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.</p><p> ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲ್ ಕುಮಾರ್ ನಾಯ್ಕ, ಮಾಜಿ ಮೇಯರ್ ಎಸ್.ಟಿ. ವೀರೇಶ್, ವಕ್ತಾರ ಬಿ.ಎಂ. ಸತೀಶ್, ಮಹಾನಗರ ವಿರೋಧ ಪಕ್ಷದ ನಾಯಕ ಕೆ. ಪ್ರಸನ್ನ ಕುಮಾರ್, ಎಚ್.ಪಿ. ವಿಶ್ವಾಸ್ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕಾಂಗ್ರೆಸ್ ಸರ್ಕಾರ ನೀಡಿರುವ ಚೊಂಬು ಜಾಹೀರಾತನ್ನು ವಿರೋಧಿಸಿ ಬಿಜೆಪಿಯು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಏ.22ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.</p>.<p> ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ, ಬರಗಾಲದ ಸಂದರ್ಭ ಪರಿಹಾರ ನೀಡಿಲ್ಲ, ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ ₹6000ಗಳನ್ನು ಬಿಟ್ಟರೆ ಬಿಜೆಪಿ ಸರ್ಕಾರವಿದ್ದಾಗ ನೀಡುತ್ತಿದ್ದ ₹4000ಗಳನ್ನು ರದ್ದು ಮಾಡಿ, ರೈತರಿಗೆ ಚಿಪ್ಪು ನೀಡಿದೆ. ವಿದ್ಯಾರ್ಥಿವೇತನ ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ, ಹಾಲಿನ ಪ್ರೋತ್ಸಾಹ ಧನ ರದ್ದು ಮಾಡಿ ಹಾಲು ಉತ್ಪಾದಕರಿಗೆ, ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ₹11,146 ಕೋಟಿಯನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಪರಿಶಿಷ್ಟರಿಗೆ, ವೃದ್ಧಾಪ್ಯ ವೇತನ ನೀಡದೇ ವೃದ್ಧರ ಕೈಗೂ ಈ ಸರ್ಕಾರ ಚಿಪ್ಪು ನೀಡಿದೆ. ಇದನ್ನು ಖಂಡಿಸಿ ದಾವಣಗೆರೆಯಲ್ಲಿ ಬೃಹತ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>ಬಿಜೆಪಿ ರೈತರು, ಮಹಿಳೆಯರು ಹಾಗೂ ದಲಿತರಿಗೆ ಅಕ್ಷಯ ಪಾತ್ರೆಯನ್ನು ನೀಡಿದರೆ, ಜನರ ಕೈಗೆ ಚಿಪ್ಪು ನೀಡಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ಚಿಪ್ಪು ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು.</p><p>ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಳಿ ತಪ್ಪಿದ್ದು, ಯುವತಿಯರು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯೇ ಸಾಕ್ಷಿ . ಪ್ರೀತಿಸಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತ ಸಮುದಾಯದ ಫಯಾಜ್ ಎಂಬಾತ ಹಾಡುಹಗಲೇ 9 ಬಾರಿ ಚುಚ್ಚಿ ಸಾಯಿಸಿದ್ದಾನೆ. ಆದರೆ ರಾಜ್ಯ ಗೃಹ ಸಚಿವರು ಇದು ವೈಯಕ್ತಿಕ ವಿಷಯ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ. ಉಗ್ರಗಾಮಿಗಳಿಗೆ, ಭಯೋತ್ಪಾದಕರಿಗೆ 'ಮೈಬ್ರದರ್'' ನೀತಿ ಅನುಸರಣೆ ಮಾಡುತ್ತಿರುವುದರಿಂದ ದುಷ್ಕೃತ್ಯಗಳು ಜಾಸ್ತಿಯಾಗಿವೆ ಎಂದು ದೂರಿದರು. </p><p>ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾದ ಮೇಲೆ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ತಿಳಿಸಲಿ. ಸಂಸದರು ದಾವಣಗೆರೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಗೆ ಯತ್ನಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಕಾಲೇಜಿಗೆ ಅಡ್ಡಿ ಆಗುತ್ತದೆ ಎಂದು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.</p><p>ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಹತ್ತು ತಿಂಗಳಲ್ಲಿ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಪ್ರಶ್ನಿಸ ಬೇಕಾಗುತ್ತದೆ. ಅರ್ಧಂಬರ್ಧ ಕುಂದುವಾಡ ಕೆರೆ ಮಾಡಿ ಮಲ್ಲಿಕಾರ್ಜುನ ಸಾಗರ ಎಂದು ಹೆಸರಿಟ್ಟಿದ್ದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಅದನ್ನು ಅಭಿವೃದ್ಧಿಪಡಿಸಿದೆವು ಎಂದು ಹೇಳಿದರು.</p><p>ನಾನು ಭ್ರಷ್ಟಾಚಾರ ಮಾಡಿದ್ದೇನೆ ಎಂದು ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ. ನಾನು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮ ಪಂಚಾಯತಿ ಸದಸ್ಯರಾಗಲೂ ಲಾಯಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.</p><p> ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲ್ ಕುಮಾರ್ ನಾಯ್ಕ, ಮಾಜಿ ಮೇಯರ್ ಎಸ್.ಟಿ. ವೀರೇಶ್, ವಕ್ತಾರ ಬಿ.ಎಂ. ಸತೀಶ್, ಮಹಾನಗರ ವಿರೋಧ ಪಕ್ಷದ ನಾಯಕ ಕೆ. ಪ್ರಸನ್ನ ಕುಮಾರ್, ಎಚ್.ಪಿ. ವಿಶ್ವಾಸ್ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>