<p><strong>ಉಚ್ಚಂಗಿದುರ್ಗ:</strong> ಅರಸೀಕೆರೆ ಹೋಬಳಿಯನ್ನು ಶೈಕ್ಷಣಿಕ ಕೇಂದ್ರವನ್ನಾಗಿಸಲು ಶಾಸಕರು ಹಾಗೂ ಸಂಸದರು ಸಹಕರಿಸಬೇಕು ಎಂದು ಅರಸೀಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಅರಸೀಕೆರೆಯ ಕೋಲ ಶಾಂತೇಶ್ವರ ಮಠದಲ್ಲಿ ಭಾನುವಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದ ಶಾಸಕ ಎಸ್.ವಿ ರಾಮಚಂದ್ರ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅರಸೀಕೆರೆಗೆ ಕೇಂದ್ರೀಯ ವಿದ್ಯಾಲಯ ಮಂಜೂರು ಆಗಿದೆ. ಸೈನಿಕ ಶಾಲೆ ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಶ್ರಮಿಸಬೇಕು. ಅರಸೀಕೆರೆ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯಿತಿ ಮಾಡುವ ಕುರಿತು ಶಾಸಕರು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಬೇಕು. ಜನಪ್ರತಿನಿಧಿಗಳು ಜನಾನುರಾಗಿಗಳಾಗಿ ಇರಬೇಕು. ಅವರ ಅಭಿವೃದ್ಧಿ ಕೆಲಸ ಶಾಶ್ವತವಾಗಿ ಉಳಿಯಬೇಕು. ಈ ದಿಸೆಯಲ್ಲಿ ಶಾಸಕರು, ಸಂಸದರು ಕಾರ್ಯಮಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಎಸ್.ವಿ. ರಾಮಚಂದ್ರ, ‘ಬಳ್ಳಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅರಸೀಕೆರೆ ಬ್ಲಾಕ್ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಈ ನಡುವೆಯೂ ಅರಸೀಕೆರೆ-ಕಂಚಿಕೆರೆರಸ್ತೆ ಕಾಮಗಾರಿಯನ್ನು ಎರಡುವಾರದೊಳಗೆ ಆರಂಭಿಸಲಾಗುವುದು. ಅರಸೀಕೆರೆಗೆ ಹೈಟೆಕ್ ಬಸ್ ನಿಲ್ದಾಣ ಮಂಜೂರಾಗಿದ್ದು, ಕಾಮಗಾರಿಗೆ ಚಾಲನೆ ನೀಡಲಾಗುವುದು. ಕೇವಲ ಒಂದು ಸಮುದಾಯದ ಅಭಿವೃದ್ಧಿಗೆ ಶ್ರಮಿಸದೇ<br />ಎಲ್ಲ ಜನಾಂಗದ ಏಳಿಗೆಗಾಗಿ ದುಡಿಯುವ ಹಂಬಲವಿದೆ. ಮುಖ್ಯಮಂತ್ರಿ ಕೂಡ ಸ್ಪಂದಿಸಿದ್ದು, ಕೋವಿಡ್ ನಿಯಂತ್ರಣಕ್ಕೆ ಬಂದಮೇಲೆ ಪರ್ಯಾಯ ಮಾರ್ಗ ಸಿಗಲಿದೆ’ ಎಂದರು.</p>.<p>ಸಂಸದ ವೈ. ದೇವೇಂದ್ರಪ್ಪ, ‘ಅರಸೀಕೆರೆ ಬ್ಲಾಕ್ ಅಭಿವೃದ್ಧಿಗೆ ಶಾಸಕರು ಬೆನ್ನುಲುಬಾಗಿ ನಿಂತಿದ್ದಾರೆ. ವ್ಯಾಪಕವಾಗಿ ಹರಡುತ್ತಿರುವ ಸೋಂಕಿನ ಬಗ್ಗೆ ಜಾಗ್ರತೆ ಅಗತ್ಯ. ಸಾರ್ವಜನಿಕರು ಆತಂಕ ಪಡದೇ ಮುಂಜಾಗ್ರತೆ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮುಖಂಡರಾದ ವೈ.ಡಿ. ಅಣ್ಣಪ್ಪ, ಕೆ.ಎಂ. ವಿಶ್ವನಾಥಯ್ಯ, ಕೆ. ಆನಂದಪ್ಪ, ಪರಶುರಾಮಪ್ಪ, ಹನುಮಂತಪ್ಪ, ಮಂಜುನಾಥಯ್ಯ, ಲಿಂಗಪ್ಪ, ದಸ್ತುಗಿರಿ ಲಿಂಗಪ್ಪ ಶೆಡ್ಯರ, ಬಸವರಾಜ, ಭರಮಣ್ಣ, ಷಣ್ಮುಕಪ್ಪ, ಫಣಿಯಪುರ ಲಿಂಗರಾಜ, ಬಾಲೆನಹಳ್ಳಿ ಕೆಂಚನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಚ್ಚಂಗಿದುರ್ಗ:</strong> ಅರಸೀಕೆರೆ ಹೋಬಳಿಯನ್ನು ಶೈಕ್ಷಣಿಕ ಕೇಂದ್ರವನ್ನಾಗಿಸಲು ಶಾಸಕರು ಹಾಗೂ ಸಂಸದರು ಸಹಕರಿಸಬೇಕು ಎಂದು ಅರಸೀಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಅರಸೀಕೆರೆಯ ಕೋಲ ಶಾಂತೇಶ್ವರ ಮಠದಲ್ಲಿ ಭಾನುವಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದ ಶಾಸಕ ಎಸ್.ವಿ ರಾಮಚಂದ್ರ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅರಸೀಕೆರೆಗೆ ಕೇಂದ್ರೀಯ ವಿದ್ಯಾಲಯ ಮಂಜೂರು ಆಗಿದೆ. ಸೈನಿಕ ಶಾಲೆ ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಶ್ರಮಿಸಬೇಕು. ಅರಸೀಕೆರೆ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯಿತಿ ಮಾಡುವ ಕುರಿತು ಶಾಸಕರು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಬೇಕು. ಜನಪ್ರತಿನಿಧಿಗಳು ಜನಾನುರಾಗಿಗಳಾಗಿ ಇರಬೇಕು. ಅವರ ಅಭಿವೃದ್ಧಿ ಕೆಲಸ ಶಾಶ್ವತವಾಗಿ ಉಳಿಯಬೇಕು. ಈ ದಿಸೆಯಲ್ಲಿ ಶಾಸಕರು, ಸಂಸದರು ಕಾರ್ಯಮಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಎಸ್.ವಿ. ರಾಮಚಂದ್ರ, ‘ಬಳ್ಳಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅರಸೀಕೆರೆ ಬ್ಲಾಕ್ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಈ ನಡುವೆಯೂ ಅರಸೀಕೆರೆ-ಕಂಚಿಕೆರೆರಸ್ತೆ ಕಾಮಗಾರಿಯನ್ನು ಎರಡುವಾರದೊಳಗೆ ಆರಂಭಿಸಲಾಗುವುದು. ಅರಸೀಕೆರೆಗೆ ಹೈಟೆಕ್ ಬಸ್ ನಿಲ್ದಾಣ ಮಂಜೂರಾಗಿದ್ದು, ಕಾಮಗಾರಿಗೆ ಚಾಲನೆ ನೀಡಲಾಗುವುದು. ಕೇವಲ ಒಂದು ಸಮುದಾಯದ ಅಭಿವೃದ್ಧಿಗೆ ಶ್ರಮಿಸದೇ<br />ಎಲ್ಲ ಜನಾಂಗದ ಏಳಿಗೆಗಾಗಿ ದುಡಿಯುವ ಹಂಬಲವಿದೆ. ಮುಖ್ಯಮಂತ್ರಿ ಕೂಡ ಸ್ಪಂದಿಸಿದ್ದು, ಕೋವಿಡ್ ನಿಯಂತ್ರಣಕ್ಕೆ ಬಂದಮೇಲೆ ಪರ್ಯಾಯ ಮಾರ್ಗ ಸಿಗಲಿದೆ’ ಎಂದರು.</p>.<p>ಸಂಸದ ವೈ. ದೇವೇಂದ್ರಪ್ಪ, ‘ಅರಸೀಕೆರೆ ಬ್ಲಾಕ್ ಅಭಿವೃದ್ಧಿಗೆ ಶಾಸಕರು ಬೆನ್ನುಲುಬಾಗಿ ನಿಂತಿದ್ದಾರೆ. ವ್ಯಾಪಕವಾಗಿ ಹರಡುತ್ತಿರುವ ಸೋಂಕಿನ ಬಗ್ಗೆ ಜಾಗ್ರತೆ ಅಗತ್ಯ. ಸಾರ್ವಜನಿಕರು ಆತಂಕ ಪಡದೇ ಮುಂಜಾಗ್ರತೆ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮುಖಂಡರಾದ ವೈ.ಡಿ. ಅಣ್ಣಪ್ಪ, ಕೆ.ಎಂ. ವಿಶ್ವನಾಥಯ್ಯ, ಕೆ. ಆನಂದಪ್ಪ, ಪರಶುರಾಮಪ್ಪ, ಹನುಮಂತಪ್ಪ, ಮಂಜುನಾಥಯ್ಯ, ಲಿಂಗಪ್ಪ, ದಸ್ತುಗಿರಿ ಲಿಂಗಪ್ಪ ಶೆಡ್ಯರ, ಬಸವರಾಜ, ಭರಮಣ್ಣ, ಷಣ್ಮುಕಪ್ಪ, ಫಣಿಯಪುರ ಲಿಂಗರಾಜ, ಬಾಲೆನಹಳ್ಳಿ ಕೆಂಚನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>