<p><strong>ದಾವಣಗೆರೆ</strong>: ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಸರ್ಕಾರದಿಂದ ಮಾತ್ರವೇ ಸಾಧ್ಯವಿಲ್ಲ. ರೈತರೊಂದಿಗೆ ನಿರಂತರ ಒಡನಾಟ ಹೊಂದಿರುವ ಕೃಷಿ ಪರಿಕರ ಮಾರಾಟಗಾರರು ಕೈಜೋಡಿಸುವ ಅಗತ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಜಿಯಾವುಲ್ಲಾ ಹೇಳಿದರು.</p>.<p>ತಾಲ್ಲೂಕಿನ ಕಾಡಜ್ಜಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪರಿಕರ ಮಾರಾಟ ಹಾಗೂ ಕೃಷಿ ವಿಸ್ತರಣಾ ಸೇವೆಯ ಡಿಪ್ಲೊಮಾ ವಿದ್ಯಾರ್ಥಿಗಳು ಭಾನುವಾರ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿ ಪರಿಕರ ಮಾರಾಟದ ಜೊತೆಗೆ ರೈತರಲ್ಲಿ ಅರಿವು ಮೂಡಿಸುವ ಜವಾಬ್ದಾರಿಯೂ ಇದೆ. ಕೀಟನಾಶಕ ಮತ್ತು ರಸಗೊಬ್ಬರ ಬಳಕೆ, ಬೇಸಾಯ ಪದ್ಧತಿಯ ಕುರಿತು ಜಾಗೃತಿ ಮೂಡಿಸಬೇಕು. ಕೃಷಿ ಸಂಬಂಧಿ ಸಂಶೋಧನೆ, ಆವಿಷ್ಕಾರಗಳನ್ನು ರೈತರಿಗೆ ತಲುಪಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಕೃಷಿಗೆ ಪೂರಕವಾಗಿರುವ ಉದ್ಯಮದಲ್ಲಿ ಲಾಭದ ಉದ್ದೇಶವನ್ನಷ್ಟೇ ಹೊಂದಿದ್ದರೆ ಯಶಸ್ಸು ಕಾಣಲು ಸಾಧ್ಯವಿಲ್ಲ. ಅಗತ್ಯ ಸೇವೆಗೆ ಒತ್ತು ನೀಡಿದರೆ ಲಾಭವೂ ಸಿಗುತ್ತದೆ. ಕೃಷಿ ಕ್ಷೇತ್ರದಲ್ಲಿ ಸುಸ್ಥಿರತೆ ಕಾಪಾಡುತ್ತ ಮೌಲ್ಯಾಧಾರಿತ ಲಾಭ ಗಳಿಸುವತ್ತ ಗಮನ ಹರಿಸಿ’ ಎಂದರು.</p>.<p>‘ಈ ಹಿಂದೆ ಕೃಷಿಗೂ ಮತ್ತು ಬಡತನಕ್ಕೂ ಸಂಬಂಧವಿರಲಿಲ್ಲ. ಕುಟುಂಬದ ಅಗತ್ಯಗಳನ್ನು ರೈತರೇ ಬೆಳೆದುಕೊಳ್ಳುತ್ತಿದ್ದರು. ಸಂತೆಯ ಪರಿಕಲ್ಪನೆ ಕೂಡ ಇರಲಿಲ್ಲ. ನಿತ್ಯ ಜಮೀನಿಂದ ತರುತ್ತಿದ್ದ ಸೊಪ್ಪು, ತರಕಾರಿಯಲ್ಲಿಯೇ ಅಡುಗೆ ಆಗುತ್ತಿತ್ತು. ಕಾಲ ಬದಲಾಗಿದ್ದು, ಜಮೀನಿಗಿಂತ ಮಾರುಕಟ್ಟೆಯ ಮೇಲೆ ಅವಲಂಬನೆ ಹೆಚ್ಚಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೃಷಿ ಇಲಾಖೆಯ ಉಪನಿರ್ದೇಶಕ ಆರ್.ತಿಪ್ಪೇಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ರಾಜಶೇಖರಪ್ಪ, ಕೃಷಿ ವಿಜ್ಞಾನಿ ಮಲ್ಲಿಕಾರ್ಜುನ, ತರಬೇತಿ ಕೇಂದ್ರದ ಮುಖ್ಯಸ್ಥ ಗೊಂದಿ ಮಂಜುನಾಥ್, ಪ್ರಾಂಶುಪಾಲ ಜಿ.ಟಿ.ಸುದರ್ಶನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಸರ್ಕಾರದಿಂದ ಮಾತ್ರವೇ ಸಾಧ್ಯವಿಲ್ಲ. ರೈತರೊಂದಿಗೆ ನಿರಂತರ ಒಡನಾಟ ಹೊಂದಿರುವ ಕೃಷಿ ಪರಿಕರ ಮಾರಾಟಗಾರರು ಕೈಜೋಡಿಸುವ ಅಗತ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಜಿಯಾವುಲ್ಲಾ ಹೇಳಿದರು.</p>.<p>ತಾಲ್ಲೂಕಿನ ಕಾಡಜ್ಜಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪರಿಕರ ಮಾರಾಟ ಹಾಗೂ ಕೃಷಿ ವಿಸ್ತರಣಾ ಸೇವೆಯ ಡಿಪ್ಲೊಮಾ ವಿದ್ಯಾರ್ಥಿಗಳು ಭಾನುವಾರ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿ ಪರಿಕರ ಮಾರಾಟದ ಜೊತೆಗೆ ರೈತರಲ್ಲಿ ಅರಿವು ಮೂಡಿಸುವ ಜವಾಬ್ದಾರಿಯೂ ಇದೆ. ಕೀಟನಾಶಕ ಮತ್ತು ರಸಗೊಬ್ಬರ ಬಳಕೆ, ಬೇಸಾಯ ಪದ್ಧತಿಯ ಕುರಿತು ಜಾಗೃತಿ ಮೂಡಿಸಬೇಕು. ಕೃಷಿ ಸಂಬಂಧಿ ಸಂಶೋಧನೆ, ಆವಿಷ್ಕಾರಗಳನ್ನು ರೈತರಿಗೆ ತಲುಪಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಕೃಷಿಗೆ ಪೂರಕವಾಗಿರುವ ಉದ್ಯಮದಲ್ಲಿ ಲಾಭದ ಉದ್ದೇಶವನ್ನಷ್ಟೇ ಹೊಂದಿದ್ದರೆ ಯಶಸ್ಸು ಕಾಣಲು ಸಾಧ್ಯವಿಲ್ಲ. ಅಗತ್ಯ ಸೇವೆಗೆ ಒತ್ತು ನೀಡಿದರೆ ಲಾಭವೂ ಸಿಗುತ್ತದೆ. ಕೃಷಿ ಕ್ಷೇತ್ರದಲ್ಲಿ ಸುಸ್ಥಿರತೆ ಕಾಪಾಡುತ್ತ ಮೌಲ್ಯಾಧಾರಿತ ಲಾಭ ಗಳಿಸುವತ್ತ ಗಮನ ಹರಿಸಿ’ ಎಂದರು.</p>.<p>‘ಈ ಹಿಂದೆ ಕೃಷಿಗೂ ಮತ್ತು ಬಡತನಕ್ಕೂ ಸಂಬಂಧವಿರಲಿಲ್ಲ. ಕುಟುಂಬದ ಅಗತ್ಯಗಳನ್ನು ರೈತರೇ ಬೆಳೆದುಕೊಳ್ಳುತ್ತಿದ್ದರು. ಸಂತೆಯ ಪರಿಕಲ್ಪನೆ ಕೂಡ ಇರಲಿಲ್ಲ. ನಿತ್ಯ ಜಮೀನಿಂದ ತರುತ್ತಿದ್ದ ಸೊಪ್ಪು, ತರಕಾರಿಯಲ್ಲಿಯೇ ಅಡುಗೆ ಆಗುತ್ತಿತ್ತು. ಕಾಲ ಬದಲಾಗಿದ್ದು, ಜಮೀನಿಗಿಂತ ಮಾರುಕಟ್ಟೆಯ ಮೇಲೆ ಅವಲಂಬನೆ ಹೆಚ್ಚಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೃಷಿ ಇಲಾಖೆಯ ಉಪನಿರ್ದೇಶಕ ಆರ್.ತಿಪ್ಪೇಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ರಾಜಶೇಖರಪ್ಪ, ಕೃಷಿ ವಿಜ್ಞಾನಿ ಮಲ್ಲಿಕಾರ್ಜುನ, ತರಬೇತಿ ಕೇಂದ್ರದ ಮುಖ್ಯಸ್ಥ ಗೊಂದಿ ಮಂಜುನಾಥ್, ಪ್ರಾಂಶುಪಾಲ ಜಿ.ಟಿ.ಸುದರ್ಶನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>