ಮಳೆ ಬಂದಾಗ ಸೇತುವೆ ಮೇಲೆ ನೀರು ಹರಿಯುವುದರಿಂದ ಗುಂಡಿಗಳು ವಾಹನ ಸವಾರರಿಗೆ ಕಾಣುವುದಿಲ್ಲ. ಇದರಿಂದ ಹಲವರು ಬಿದ್ದಿದ್ದಾರೆ. ಈಚೆಗೆ ದಂಪತಿಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸೂಚನಾ ಫಲಕ ಅಥವಾ ಬ್ಯಾರಿಕೇಡ್ ಹಾಕಿಲ್ಲ. ಇದರಿಂದ ಹಲವರು ಬಿದ್ದು ಗಾಯಗೊಂಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.