<p><strong>ಮಲೇಬೆನ್ನೂರು</strong>:ಧಾರ್ಮಿಕ ಆಚರಣೆಗೆ ಒತ್ತು ನೀಡುವಂತೆ ಶಿಕ್ಷಣಕ್ಕೂ ಹೆಚ್ಚು ಒತ್ತು ನೀಡಿ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಲಹೆ ನೀಡಿದರು.</p>.<p>ಸಮೀಪದ ಹಿರೆಹಾಲಿವಾಣ ಗ್ರಾಮದ ಬೀರಲಿಂಗೇಶ್ವರ ಮರಿಬನ್ನಿ ಉತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಹಬ್ಬದ ವೇಳೆ ಪ್ರಾಣಿಬಲಿ ನೀಡಬೇಡಿ. ಹಬ್ಬ ಮಾಡಿ ಸಾಲದ ಬಲೆಗೆ ಸಿಲುಕಬಾರದು. ಇದರಿಂದ ಆರ್ಥಿಕವಾಗಿ ನಷ್ಟ ಅನುಭವಿಸಬೇಕಾಗುತ್ತದೆ. ಸಮಾಜ ಸುಧಾರಣೆಗೆ ಹೆಚ್ಚು ಒತ್ತು ನೀಡಿ ಎಂದು ಕಿವಿಮಾತು ಹೇಳಿದರು.</p>.<p>ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ‘ಸಾಮೂಹಿಕ ವಿವಾಹದಿಂದ ದುಂದುವಚ್ಚಕ್ಕೆ ಕಡಿವಾಣ ಹಾಕಬಹುದು. ದಂಪತಿ ಆದರ್ಶದ ಬದುಕು ಸಾಗಿಸಿ’ ಎಂದರು.</p>.<p>ಹದಡಿ ಪರಮಹಂಸ ಮುರುಳೀಧರ ಸ್ವಾಮೀಜಿ ನೂತನ ವಧುವರರಿಗೆ ಶುಭ ಹಾರೈಸಿದರು.</p>.<p>ಸಾಮೂಹಿಕ ವಿವಾಹದಲ್ಲಿ 10 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ, ಎಪಿಎಂಸಿ ನಿರ್ದೇಶಕ ಮಂಜುನಾಥ್ ಪಟೇಲ್, ಪಿ.ಎಸ್. ಹನುಮಂತಪ್ಪ, ಮಾಗಾನಹಳ್ಳಿ ಹಾಲಪ್ಪ, ಗ್ರಾಮಸ್ಥರು ಇದ್ದರು.</p>.<p>ಎಸ್.ಜಿ. ಪರಮೇಶ್ವರಪ್ಪ ಸ್ವಾಗತಿಸಿದರು. ಎಸ್.ಜಿ. ಸಿದ್ದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಡಿ. ರೇವಣಸಿದ್ದಪ್ಪ ನಿರೂಪಿಸಿದರು. ಕುಡುಪಲಿ ತಿಪ್ಪೇಶ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು</strong>:ಧಾರ್ಮಿಕ ಆಚರಣೆಗೆ ಒತ್ತು ನೀಡುವಂತೆ ಶಿಕ್ಷಣಕ್ಕೂ ಹೆಚ್ಚು ಒತ್ತು ನೀಡಿ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಲಹೆ ನೀಡಿದರು.</p>.<p>ಸಮೀಪದ ಹಿರೆಹಾಲಿವಾಣ ಗ್ರಾಮದ ಬೀರಲಿಂಗೇಶ್ವರ ಮರಿಬನ್ನಿ ಉತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಹಬ್ಬದ ವೇಳೆ ಪ್ರಾಣಿಬಲಿ ನೀಡಬೇಡಿ. ಹಬ್ಬ ಮಾಡಿ ಸಾಲದ ಬಲೆಗೆ ಸಿಲುಕಬಾರದು. ಇದರಿಂದ ಆರ್ಥಿಕವಾಗಿ ನಷ್ಟ ಅನುಭವಿಸಬೇಕಾಗುತ್ತದೆ. ಸಮಾಜ ಸುಧಾರಣೆಗೆ ಹೆಚ್ಚು ಒತ್ತು ನೀಡಿ ಎಂದು ಕಿವಿಮಾತು ಹೇಳಿದರು.</p>.<p>ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ‘ಸಾಮೂಹಿಕ ವಿವಾಹದಿಂದ ದುಂದುವಚ್ಚಕ್ಕೆ ಕಡಿವಾಣ ಹಾಕಬಹುದು. ದಂಪತಿ ಆದರ್ಶದ ಬದುಕು ಸಾಗಿಸಿ’ ಎಂದರು.</p>.<p>ಹದಡಿ ಪರಮಹಂಸ ಮುರುಳೀಧರ ಸ್ವಾಮೀಜಿ ನೂತನ ವಧುವರರಿಗೆ ಶುಭ ಹಾರೈಸಿದರು.</p>.<p>ಸಾಮೂಹಿಕ ವಿವಾಹದಲ್ಲಿ 10 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ, ಎಪಿಎಂಸಿ ನಿರ್ದೇಶಕ ಮಂಜುನಾಥ್ ಪಟೇಲ್, ಪಿ.ಎಸ್. ಹನುಮಂತಪ್ಪ, ಮಾಗಾನಹಳ್ಳಿ ಹಾಲಪ್ಪ, ಗ್ರಾಮಸ್ಥರು ಇದ್ದರು.</p>.<p>ಎಸ್.ಜಿ. ಪರಮೇಶ್ವರಪ್ಪ ಸ್ವಾಗತಿಸಿದರು. ಎಸ್.ಜಿ. ಸಿದ್ದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಡಿ. ರೇವಣಸಿದ್ದಪ್ಪ ನಿರೂಪಿಸಿದರು. ಕುಡುಪಲಿ ತಿಪ್ಪೇಶ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>