ದಾವಣಗೆರೆ ಪೂರ್ವ ವಲಯ ಐಜಿಪಿ ಅಮೃತ್ ಪಾಲ್ ಬಹುಮಾನ ವಿತರಿಸಿ ಮಾತನಾಡಿ, ‘ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದವರು ಎಷ್ಟು ಮುಖ್ಯವೋ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರೂ ಅಷ್ಟೇ ಮುಖ್ಯ. ಏಕೆಂದರೆ ಸ್ಪರ್ಧೆ ಇಲ್ಲದಿದ್ದರೆ ಆತ ಮೊದಲ ಸ್ಥಾನ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಈ ಹಿಂದೆ ಸರಳವಾಗಿ ಆಡುತ್ತಿದ್ದಾಗ ಅಂತಹ ಉತ್ಸಾಹ ಇರಲಿಲ್ಲ. ಸ್ಪರ್ಧೆಗಳು ಇದ್ದಾಗ ಮಾತ್ರ ಗೆಲುವು ಸಾಧ್ಯ’ ಎಂದು ಹೇಳಿದರು.