<p><strong>ಶಿವಮೊಗ್ಗ</strong>: ‘40–50 ವರ್ಷಗಳಿಂದ ನಿವೇಶನವಿಲ್ಲದೆ ಪರದಾಡುತ್ತಿರುವ ಕೊಳೆಗೇರಿಯ ಸುಮಾರು 150 ಕುಟುಂಬಗಳಿಗೆ ಸರ್ಕಾರಿ ಜಮೀನನ್ನು ಕಾಯ್ದಿರಿಸಿ ಅಭಿವೃದ್ಧಿಪಡಿಸಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು’ ಎಂದು ಒತ್ತಾಯಿಸಿ ನಗರದ ನವುಲೆ ಕೊಳಚೆ ನಿವಾಸಿಗಳ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p>ವಾರ್ಡ್ ನಂ.2ರ ನವುಲೆ, ಅಂಬೇಡ್ಕರ್ ಕಾಲೊನಿಯಲ್ಲಿ ಪರಿಶಿಷ್ಟಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸುಮಾರು 150 ಕುಟುಂಬಗಳು ವಾಸವಾಗಿದ್ದು, ತುಂಗಾ ನಾಲೆಯ ಎಡಭಾಗ ಮತ್ತು ಬಲಭಾಗದಲ್ಲಿ ಕಿರಿದಾದ ಮನೆ ಕಟ್ಟಿಕೊಂಡಿದ್ದಾರೆ. ಈಗಾಗಲೇ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ವರದಿ ನೀಡಿದ್ದಾರೆ. ಈ ಗ್ರಾಮದ ಸರ್ವೆ ನಂ.72ರಲ್ಲಿ 3 ಎಕರೆ ಜಮೀನನ್ನು ಕೊಳಚೆ ನಿವಾಸಿಗಳ ಸಂಘಕ್ಕೆ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ತುಂಗಾ ಎಡದಂಡೆ ಮತ್ತು ಬಲದಂಡೆಯ ಪಕ್ಕದಲ್ಲಿ ವಾಸ ಮಾಡುತ್ತಿರುವವರಿಗೆ ಮಳೆಗಾಲ ಬಂತೆಂದರೆ ಇಡೀ ನಗರದ ಕೊಳಚೆಯು ಕಾಲುವೆ ಮೂಲಕ ಬಡವರ ಮನೆಗಳಿಗೆ ನುಗ್ಗುತ್ತಿದೆ. ಜಮೀನನ್ನು ಕೊಳಚೆ ನಿರ್ಮೂಲನಾ ಜಾಗವೆಂದು ಘೋಷಿಸಿ ವಿಶೇಷ ಅನುದಾನ ನೀಡಿ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಅರಮಘಟ್ಟ ರಂಗಪ್ಪ, ಅಧ್ಯಕ್ಷ ಆರ್.ಶೇಷಪ್ಪ, ಗೌರವಾಧ್ಯಕ್ಷ ಬಿ.ಸೋಮಶೇಖರ್, ಪ್ರಮುಖರಾದ ಬಿ.ಎಚ್.ಚಂದ್ರಪ್ಪ, ನಾಗರಾಜ್ ಆರ್., ಜಗನ್ನಾಥ್ ಯು., ಗೋಪಿ ಬಿ.ಎಚ್., ಜೆ.ಟಿ.ಸದಾಶಿವ, ಮಧುಸೂದನ್ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘40–50 ವರ್ಷಗಳಿಂದ ನಿವೇಶನವಿಲ್ಲದೆ ಪರದಾಡುತ್ತಿರುವ ಕೊಳೆಗೇರಿಯ ಸುಮಾರು 150 ಕುಟುಂಬಗಳಿಗೆ ಸರ್ಕಾರಿ ಜಮೀನನ್ನು ಕಾಯ್ದಿರಿಸಿ ಅಭಿವೃದ್ಧಿಪಡಿಸಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು’ ಎಂದು ಒತ್ತಾಯಿಸಿ ನಗರದ ನವುಲೆ ಕೊಳಚೆ ನಿವಾಸಿಗಳ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p>ವಾರ್ಡ್ ನಂ.2ರ ನವುಲೆ, ಅಂಬೇಡ್ಕರ್ ಕಾಲೊನಿಯಲ್ಲಿ ಪರಿಶಿಷ್ಟಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸುಮಾರು 150 ಕುಟುಂಬಗಳು ವಾಸವಾಗಿದ್ದು, ತುಂಗಾ ನಾಲೆಯ ಎಡಭಾಗ ಮತ್ತು ಬಲಭಾಗದಲ್ಲಿ ಕಿರಿದಾದ ಮನೆ ಕಟ್ಟಿಕೊಂಡಿದ್ದಾರೆ. ಈಗಾಗಲೇ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ವರದಿ ನೀಡಿದ್ದಾರೆ. ಈ ಗ್ರಾಮದ ಸರ್ವೆ ನಂ.72ರಲ್ಲಿ 3 ಎಕರೆ ಜಮೀನನ್ನು ಕೊಳಚೆ ನಿವಾಸಿಗಳ ಸಂಘಕ್ಕೆ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ತುಂಗಾ ಎಡದಂಡೆ ಮತ್ತು ಬಲದಂಡೆಯ ಪಕ್ಕದಲ್ಲಿ ವಾಸ ಮಾಡುತ್ತಿರುವವರಿಗೆ ಮಳೆಗಾಲ ಬಂತೆಂದರೆ ಇಡೀ ನಗರದ ಕೊಳಚೆಯು ಕಾಲುವೆ ಮೂಲಕ ಬಡವರ ಮನೆಗಳಿಗೆ ನುಗ್ಗುತ್ತಿದೆ. ಜಮೀನನ್ನು ಕೊಳಚೆ ನಿರ್ಮೂಲನಾ ಜಾಗವೆಂದು ಘೋಷಿಸಿ ವಿಶೇಷ ಅನುದಾನ ನೀಡಿ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಅರಮಘಟ್ಟ ರಂಗಪ್ಪ, ಅಧ್ಯಕ್ಷ ಆರ್.ಶೇಷಪ್ಪ, ಗೌರವಾಧ್ಯಕ್ಷ ಬಿ.ಸೋಮಶೇಖರ್, ಪ್ರಮುಖರಾದ ಬಿ.ಎಚ್.ಚಂದ್ರಪ್ಪ, ನಾಗರಾಜ್ ಆರ್., ಜಗನ್ನಾಥ್ ಯು., ಗೋಪಿ ಬಿ.ಎಚ್., ಜೆ.ಟಿ.ಸದಾಶಿವ, ಮಧುಸೂದನ್ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>