ವೈದ್ಯರ ಮೇಲೆ ಪದೇ ಪದೇ ಹಲ್ಲೆಯಾಗುತ್ತಿದ್ದು, ವೈದ್ಯರಿಗೆ ರಕ್ಷಣೆ ನೀಡಬೇಕು. ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಬಿ. ಮುರುಗೇಶ್, ಜೆಜೆಎಂ ಸ್ಟೂಡೆಂಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಮೀರ್ ಲುಕ್ಮಾನ್ ಮೆಹದಿ, ಜೂನಿಯರ್ ಡಾಕ್ಟರ್ಸ್ ಅಸೋಸಿಯೇಷನ್ನ ಅಧ್ಯಕ್ಷ ಡಾ. ಪ್ರತ್ಯಕ್ಷ್ ವೈಷ್ಣ, ಮೆಡಿಕಲ್ ಸರ್ವಿಸ್ ಸೆಂಟರ್ ದಾವಣಗೆರೆ ಶಾಖೆಯ ಡಾ. ವಸುಧೇಂದ್ರ ಎನ್. ಸೇರಿ ಯುವ ವೈದ್ಯರು ಭಾಗವಹಿಸಿದ್ದರು.