<p>ದಾವಣಗೆರೆ: ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಯಶಸ್ಸು ಪಡೆಯಲು ಜ್ಞಾನವೇ ಶಕ್ತಿಯಾಗಿದ್ದು, ಜ್ಞಾನ ಮತ್ತು ಕೌಶಲ ಹೆಚ್ಚಿಸಿಕೊಂಡಾಗ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಆತ್ಮವಿಶ್ವಾಸ ಮತ್ತು ಸದೃಢ ಮನಸ್ಸು ಯಶಸ್ಸಿನ ಆಯುಧಗಳು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ್ ಕುರ್ಕಿ ಅಭಿಪ್ರಾಯಪಟ್ಟರು.</p>.<p>ನಗರದ ಚೈತನ್ಯ ಹೈ-ಟೆಕ್ ವಾಣಿಜ್ಯ ಮತ್ತು ನಿರ್ವಹಣಾ ಪದವಿ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವಾಗ ನಿಮ್ಮ ಆತ್ಮವಿಶ್ವಾಸದ ಕೊರತೆಯಾಗುತ್ತದೆಯೋ ಅಂದೇ ನಿಮ್ಮ ಅಂತ್ಯವಾಗುತ್ತದೆ. ನೀವು ದುರ್ಗಮದ ಹಾದಿಯಲ್ಲಿ ಸಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂಸ್ಥೆ ಅಧ್ಯಕ್ಷ ಅಭಿಷೇಕ್ ಬೇತೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಮುಂದೆಯೂ ಇಂತಹ ಹೆಸರಾಂತ ಕಂಪನಿಗಳ ಸಹಭಾಗಿತ್ವದಲ್ಲಿ ಇಂತಹ ಮೇಳ ಆಯೋಜಿಸಲಾಗುವುದು’ ಎಂದರು.</p>.<p>ಕಾರ್ಯದರ್ಶಿ ಪ್ರೀತಿ, ಐಸಿಐಸಿಐ ಕರ್ನಾಟಕ ರಿಕ್ರೂಟ್ ಮೆಂಟ್ ಮ್ಯಾನೇಜರ್ ಸುರೇಂದ್ರ ಇದ್ದರು.<br />ಕ್ರಿಯೇಟಿವ್ ಎಂಜಿನಿಯರ್ಸ್ ಕಂಪನಿ, ಐಸಿಐಸಿಐ ಬ್ಯಾಂಕ್, ಡಿಪ್ ಸನ್ಸ್, ಸ್ಟಾರ್ ಹೆಲ್ತ್ ಇನ್ಷುರೆನ್ಸ್ ಕಂಪನಿಗಳು ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಯಶಸ್ಸು ಪಡೆಯಲು ಜ್ಞಾನವೇ ಶಕ್ತಿಯಾಗಿದ್ದು, ಜ್ಞಾನ ಮತ್ತು ಕೌಶಲ ಹೆಚ್ಚಿಸಿಕೊಂಡಾಗ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಆತ್ಮವಿಶ್ವಾಸ ಮತ್ತು ಸದೃಢ ಮನಸ್ಸು ಯಶಸ್ಸಿನ ಆಯುಧಗಳು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ್ ಕುರ್ಕಿ ಅಭಿಪ್ರಾಯಪಟ್ಟರು.</p>.<p>ನಗರದ ಚೈತನ್ಯ ಹೈ-ಟೆಕ್ ವಾಣಿಜ್ಯ ಮತ್ತು ನಿರ್ವಹಣಾ ಪದವಿ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವಾಗ ನಿಮ್ಮ ಆತ್ಮವಿಶ್ವಾಸದ ಕೊರತೆಯಾಗುತ್ತದೆಯೋ ಅಂದೇ ನಿಮ್ಮ ಅಂತ್ಯವಾಗುತ್ತದೆ. ನೀವು ದುರ್ಗಮದ ಹಾದಿಯಲ್ಲಿ ಸಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂಸ್ಥೆ ಅಧ್ಯಕ್ಷ ಅಭಿಷೇಕ್ ಬೇತೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಮುಂದೆಯೂ ಇಂತಹ ಹೆಸರಾಂತ ಕಂಪನಿಗಳ ಸಹಭಾಗಿತ್ವದಲ್ಲಿ ಇಂತಹ ಮೇಳ ಆಯೋಜಿಸಲಾಗುವುದು’ ಎಂದರು.</p>.<p>ಕಾರ್ಯದರ್ಶಿ ಪ್ರೀತಿ, ಐಸಿಐಸಿಐ ಕರ್ನಾಟಕ ರಿಕ್ರೂಟ್ ಮೆಂಟ್ ಮ್ಯಾನೇಜರ್ ಸುರೇಂದ್ರ ಇದ್ದರು.<br />ಕ್ರಿಯೇಟಿವ್ ಎಂಜಿನಿಯರ್ಸ್ ಕಂಪನಿ, ಐಸಿಐಸಿಐ ಬ್ಯಾಂಕ್, ಡಿಪ್ ಸನ್ಸ್, ಸ್ಟಾರ್ ಹೆಲ್ತ್ ಇನ್ಷುರೆನ್ಸ್ ಕಂಪನಿಗಳು ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>