<p><strong>ದಾವಣಗೆರೆ</strong>: ‘ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಆದ್ಯತೆ ನೀಡಲಿ. ಒಂದು ವೇಳೆ ಬದಲಾವಣೆ ಬಯಸುವುದಾದರೆ ನನ್ನ ಹಿರಿಯ ಸಹೋದರನಿಗೆ (ಶಿವಗಂಗಾ ಶ್ರೀನಿವಾಸ) ಟಿಕೆಟ್ ನೀಡಲಿ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಹೇಳಿದರು. </p>.<p>‘ಶಾಸಕರು ಮೃತಪಟ್ಟಾಗ ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಸಂಪ್ರದಾಯ ಕಾಂಗ್ರೆಸ್ನಲ್ಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು ಶಾಮನೂರು ಕುಟುಂಬಕ್ಕೆ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರ ಕುಟುಂಬಕ್ಕೆ ಆದ್ಯತೆ ದೊರೆಯಲಿ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>‘ಹೈಕಮಾಂಡ್ ಘೋಷಿಸಿದ ಅಭ್ಯರ್ಥಿಯ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಾಂಗ್ರೆಸ್ನಿಂದ ನನ್ನ ಸಹೋದರ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದರೆ ತಪ್ಪಿಲ್ಲ. ಅವರಿಗೆ ಟಿಕೆಟ್ ನೀಡಿದರೆ ಖಂಡಿತಾ ನಾನೇ ಚುನಾವಣೆಯನ್ನು ಮುನ್ನಡೆಸುತ್ತೇನೆ’ ಎಂದು ಹೇಳಿದರು. </p>.<p>‘ಬಳ್ಳಾರಿಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತ ಮೃತಪಟ್ಟ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಲಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಲಿ. ಯಾರು ಸಹ ಇಂತಹ ವಿಚಾರದಲ್ಲಿ ರಾಜಕಾರಣ ಮಾಡಬಾರದು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಆದ್ಯತೆ ನೀಡಲಿ. ಒಂದು ವೇಳೆ ಬದಲಾವಣೆ ಬಯಸುವುದಾದರೆ ನನ್ನ ಹಿರಿಯ ಸಹೋದರನಿಗೆ (ಶಿವಗಂಗಾ ಶ್ರೀನಿವಾಸ) ಟಿಕೆಟ್ ನೀಡಲಿ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಹೇಳಿದರು. </p>.<p>‘ಶಾಸಕರು ಮೃತಪಟ್ಟಾಗ ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಸಂಪ್ರದಾಯ ಕಾಂಗ್ರೆಸ್ನಲ್ಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು ಶಾಮನೂರು ಕುಟುಂಬಕ್ಕೆ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರ ಕುಟುಂಬಕ್ಕೆ ಆದ್ಯತೆ ದೊರೆಯಲಿ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>‘ಹೈಕಮಾಂಡ್ ಘೋಷಿಸಿದ ಅಭ್ಯರ್ಥಿಯ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಾಂಗ್ರೆಸ್ನಿಂದ ನನ್ನ ಸಹೋದರ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದರೆ ತಪ್ಪಿಲ್ಲ. ಅವರಿಗೆ ಟಿಕೆಟ್ ನೀಡಿದರೆ ಖಂಡಿತಾ ನಾನೇ ಚುನಾವಣೆಯನ್ನು ಮುನ್ನಡೆಸುತ್ತೇನೆ’ ಎಂದು ಹೇಳಿದರು. </p>.<p>‘ಬಳ್ಳಾರಿಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತ ಮೃತಪಟ್ಟ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಲಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಲಿ. ಯಾರು ಸಹ ಇಂತಹ ವಿಚಾರದಲ್ಲಿ ರಾಜಕಾರಣ ಮಾಡಬಾರದು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>