<p><strong>ದಾವಣಗೆರೆ</strong>: ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸ್ಥಳೀಯ ಮುಸ್ಲಿಂ ನಾಯಕರ ಮನವೊಲಿಸುತ್ತೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು. </p><p>‘ರಾಜ್ಯಮಟ್ಟದಲ್ಲಿ ಈಗಾಗಲೇ ಪಕ್ಷದ ವರಿಷ್ಠರು ಮುಸ್ಲಿಂ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳೀಯವಾಗಿಯೂ ಮುಸ್ಲಿಂ ಮುಖಂಡರ ಮನೆಗಳಿಗೆ ತೆರಳಿ ಸಮಾಧಾನಪಡಿಸುವ ಕೆಲಸವನ್ನು ಜಿಲ್ಲಾ ಘಟಕದಿಂದ ಮಾಡುತ್ತೇವೆ’ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. </p><p>‘ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯವರನ್ನು ಒಟ್ಟಾಗಿ ಕರೆದೊಯ್ಯುವ ಕೆಲಸವನ್ನು ಮಾಡುತ್ತೇವೆ’ ಎಂದರು. </p><p>ನಾಮಪತ್ರ ಸಲ್ಲಿಕೆ ನಾಳೆ: </p><p>‘ಸಮರ್ಥ ಶಾಮನೂರು ಅವರು ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ನಗರದೇವತೆ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಹಜರತ್ ಷಾವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು. </p><p>‘ನಂತರ ಹಳೇಪೇಟೆ, ಹಗೇದಿಬ್ಬ ವೃತ್ತ, ಗಾಂಧಿನಗರ, ಆಜಾದ್ ನಗರ, ಅಹಮದ್ ನಗರ, ಚಾರ್ಲಿ ಪೈಲ್ವಾನ್ ವೃತ್ತ, ಹಾಸಬಾವಿ ವೃತ್ತ, ಚಾಮರಾಜಪೇಟೆ ಮುಖ್ಯ ರಸ್ತೆ, ಮಂಡಿಪೇಟೆ, ರೈಲ್ವೇ ಕೆಳಸೇತುವೆ, ಪಿ.ಬಿ.ರಸ್ತೆ ಮಾರ್ಗದಲ್ಲಿ ಮಹಾನಗರ ಪಾಲಿಕೆ ವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ’ ಎಂದು ಹೇಳಿದರು. </p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು. </p><p>‘ಮುಸ್ಲಿಂ ಸಮುದಾಯದವರಿಗೆ ಕಾಂಗ್ರೆಸ್ನಿಂದ ಯಾವುದೇ ರೀತಿಯ ಆಹಾರ ಕಿಟ್ ವಿತರಿಸಿಲ್ಲ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಬೆಂಬಲಿಗರು ಅಥವಾ ಪಕ್ಷದ ಕಾರ್ಯಕರ್ತರು ವೈಯಕ್ತಿಕವಾಗಿ ವಿತರಿಸಿದ್ದರೆ ಪಕ್ಷ ಹೊಣೆಯಲ್ಲ’ ಎಂದು ಸ್ಪಷ್ಟಪಡಿಸಿದರು. </p><p>‘ನಗರದಲ್ಲಿ ಸೋಮವಾರ (ಮಾರ್ಚ್ 23ರಂದು) ಮುಸ್ಲಿಂ ಸಮುದಾಯದ ಜೆಡಿಎಸ್ ಮುಖಂಡರು ನಡೆಸುವ ಸಭೆಯಲ್ಲಿ ಸಮುದಾಯದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರೆ ಅವರ ವಿರುದ್ಧ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಎಚ್ಚರಿಸಿದರು. </p><p>‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಪಕ್ಷದ ಮುಖಂಡರಾದ ನಿಂಗಪ್ಪ ಜಿ.ಸಿ., ಬಿ.ಎಚ್.ವೀರಭದ್ರಪ್ಪ, ಅನಿತಾಬಾಯಿ, ಕೆ.ಚಮನ್ಸಾಬ್, ಮುದೇಗೌಡ್ರ ಗಿರೀಶ್, ಹನುಮಂತಪ್ಪ, ಗಿರೀಶ್, ಎ.ನಾಗರಾಜ್ ಸೇರಿದಂತೆ ಇನ್ನಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸ್ಥಳೀಯ ಮುಸ್ಲಿಂ ನಾಯಕರ ಮನವೊಲಿಸುತ್ತೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು. </p><p>‘ರಾಜ್ಯಮಟ್ಟದಲ್ಲಿ ಈಗಾಗಲೇ ಪಕ್ಷದ ವರಿಷ್ಠರು ಮುಸ್ಲಿಂ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳೀಯವಾಗಿಯೂ ಮುಸ್ಲಿಂ ಮುಖಂಡರ ಮನೆಗಳಿಗೆ ತೆರಳಿ ಸಮಾಧಾನಪಡಿಸುವ ಕೆಲಸವನ್ನು ಜಿಲ್ಲಾ ಘಟಕದಿಂದ ಮಾಡುತ್ತೇವೆ’ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. </p><p>‘ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯವರನ್ನು ಒಟ್ಟಾಗಿ ಕರೆದೊಯ್ಯುವ ಕೆಲಸವನ್ನು ಮಾಡುತ್ತೇವೆ’ ಎಂದರು. </p><p>ನಾಮಪತ್ರ ಸಲ್ಲಿಕೆ ನಾಳೆ: </p><p>‘ಸಮರ್ಥ ಶಾಮನೂರು ಅವರು ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ನಗರದೇವತೆ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಹಜರತ್ ಷಾವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು. </p><p>‘ನಂತರ ಹಳೇಪೇಟೆ, ಹಗೇದಿಬ್ಬ ವೃತ್ತ, ಗಾಂಧಿನಗರ, ಆಜಾದ್ ನಗರ, ಅಹಮದ್ ನಗರ, ಚಾರ್ಲಿ ಪೈಲ್ವಾನ್ ವೃತ್ತ, ಹಾಸಬಾವಿ ವೃತ್ತ, ಚಾಮರಾಜಪೇಟೆ ಮುಖ್ಯ ರಸ್ತೆ, ಮಂಡಿಪೇಟೆ, ರೈಲ್ವೇ ಕೆಳಸೇತುವೆ, ಪಿ.ಬಿ.ರಸ್ತೆ ಮಾರ್ಗದಲ್ಲಿ ಮಹಾನಗರ ಪಾಲಿಕೆ ವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ’ ಎಂದು ಹೇಳಿದರು. </p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು. </p><p>‘ಮುಸ್ಲಿಂ ಸಮುದಾಯದವರಿಗೆ ಕಾಂಗ್ರೆಸ್ನಿಂದ ಯಾವುದೇ ರೀತಿಯ ಆಹಾರ ಕಿಟ್ ವಿತರಿಸಿಲ್ಲ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಬೆಂಬಲಿಗರು ಅಥವಾ ಪಕ್ಷದ ಕಾರ್ಯಕರ್ತರು ವೈಯಕ್ತಿಕವಾಗಿ ವಿತರಿಸಿದ್ದರೆ ಪಕ್ಷ ಹೊಣೆಯಲ್ಲ’ ಎಂದು ಸ್ಪಷ್ಟಪಡಿಸಿದರು. </p><p>‘ನಗರದಲ್ಲಿ ಸೋಮವಾರ (ಮಾರ್ಚ್ 23ರಂದು) ಮುಸ್ಲಿಂ ಸಮುದಾಯದ ಜೆಡಿಎಸ್ ಮುಖಂಡರು ನಡೆಸುವ ಸಭೆಯಲ್ಲಿ ಸಮುದಾಯದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರೆ ಅವರ ವಿರುದ್ಧ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಎಚ್ಚರಿಸಿದರು. </p><p>‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಪಕ್ಷದ ಮುಖಂಡರಾದ ನಿಂಗಪ್ಪ ಜಿ.ಸಿ., ಬಿ.ಎಚ್.ವೀರಭದ್ರಪ್ಪ, ಅನಿತಾಬಾಯಿ, ಕೆ.ಚಮನ್ಸಾಬ್, ಮುದೇಗೌಡ್ರ ಗಿರೀಶ್, ಹನುಮಂತಪ್ಪ, ಗಿರೀಶ್, ಎ.ನಾಗರಾಜ್ ಸೇರಿದಂತೆ ಇನ್ನಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>