<p><strong>ದಾವಣಗೆರೆ:</strong> ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕೇರಳ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಮೂಡಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಕಾಂಗ್ರೆಸ್ ಮೈತ್ರಿ ಅಧಿಕಾರ ಹಿಡಿಯಲಿದೆ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ತಿಳಿಸಿದರು.</p><p>‘ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿಧೆಡೆ ಕಾಂಗ್ರೆಸ್ಗೆ ಅತ್ಯುತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಶಕ್ತಿ ಕಳೆದ ಬಾರಿಗಿಂತ ಹೆಚ್ಚಲಿದೆ. ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವು ಸಾಧಿಸಲಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.</p><p>‘2019–20ರಿಂದ 2025–26ರವರೆಗೆ ಕರ್ನಾಟಕದಿಂದ ₹ 23,000 ಕೋಟಿ ರಾಷ್ಟ್ರೀಯ ಹೆದ್ದಾರಿ ಶುಲ್ಕವನ್ನು ಕೇಂದ್ರ ಸರ್ಕಾರ ವಸೂಲಿ ಮಾಡಿದೆ. ಏ.1ರಿಂದ ಈ ಶುಲ್ಕವನ್ನು ಮತ್ತೆ ಶೇ 5ರಷ್ಟು ಹೆಚ್ಚಿಸಲಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿ ಹಲವು ಕಾಯಿಲೆಗಳಿಗೆ ರೋಗಿಗಳು ಬಳಸುವ 900 ಔಷಧಗಳ ಬೆಲೆ ಏರಿಕೆಯಾಗಿದೆ’ ಎಂದು ಆರೋಪಿಸಿದರು.</p><p>‘ದೇಶದ ಶೇ 90ರಷ್ಟು ಇಂಧನವು ಮಧ್ಯ, ಪಶ್ಚಿಮ ಏಷ್ಯಾದಿಂದ ಪೂರೈಕೆ ಆಗುತ್ತದೆ. ಯುದ್ಧ ಭೀತಿ ಗ್ರಹಿಸಿದ ಇತರ ರಾಷ್ಟ್ರಗಳು ಇಂಧನಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದವು. ಭಾರತ ಇದರಲ್ಲಿ ವಿಫಲವಾಗಿದೆ. ಈ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವಕಾಶ ನೀಡಲಿಲ್ಲ’ ಎಂದು ದೂರಿದರು.</p><p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜು ಹಾಜರಿದ್ದರು.</p>.<div><blockquote>ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಕಾಣಿಸಿಕೊಂಡಿದ್ದು, ಮುಸ್ಲಿಂ ಮತಗಳು ಇಬ್ಬಾಗ ಆಗುವುದಿಲ್ಲ </blockquote><span class="attribution">ಸಲೀಂ ಅಹಮ್ಮದ್, ಮುಖ್ಯ ಸಚೇತಕ, ವಿಧಾನಪರಿಷತ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕೇರಳ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಮೂಡಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಕಾಂಗ್ರೆಸ್ ಮೈತ್ರಿ ಅಧಿಕಾರ ಹಿಡಿಯಲಿದೆ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ತಿಳಿಸಿದರು.</p><p>‘ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿಧೆಡೆ ಕಾಂಗ್ರೆಸ್ಗೆ ಅತ್ಯುತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಶಕ್ತಿ ಕಳೆದ ಬಾರಿಗಿಂತ ಹೆಚ್ಚಲಿದೆ. ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವು ಸಾಧಿಸಲಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.</p><p>‘2019–20ರಿಂದ 2025–26ರವರೆಗೆ ಕರ್ನಾಟಕದಿಂದ ₹ 23,000 ಕೋಟಿ ರಾಷ್ಟ್ರೀಯ ಹೆದ್ದಾರಿ ಶುಲ್ಕವನ್ನು ಕೇಂದ್ರ ಸರ್ಕಾರ ವಸೂಲಿ ಮಾಡಿದೆ. ಏ.1ರಿಂದ ಈ ಶುಲ್ಕವನ್ನು ಮತ್ತೆ ಶೇ 5ರಷ್ಟು ಹೆಚ್ಚಿಸಲಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿ ಹಲವು ಕಾಯಿಲೆಗಳಿಗೆ ರೋಗಿಗಳು ಬಳಸುವ 900 ಔಷಧಗಳ ಬೆಲೆ ಏರಿಕೆಯಾಗಿದೆ’ ಎಂದು ಆರೋಪಿಸಿದರು.</p><p>‘ದೇಶದ ಶೇ 90ರಷ್ಟು ಇಂಧನವು ಮಧ್ಯ, ಪಶ್ಚಿಮ ಏಷ್ಯಾದಿಂದ ಪೂರೈಕೆ ಆಗುತ್ತದೆ. ಯುದ್ಧ ಭೀತಿ ಗ್ರಹಿಸಿದ ಇತರ ರಾಷ್ಟ್ರಗಳು ಇಂಧನಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದವು. ಭಾರತ ಇದರಲ್ಲಿ ವಿಫಲವಾಗಿದೆ. ಈ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವಕಾಶ ನೀಡಲಿಲ್ಲ’ ಎಂದು ದೂರಿದರು.</p><p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜು ಹಾಜರಿದ್ದರು.</p>.<div><blockquote>ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಕಾಣಿಸಿಕೊಂಡಿದ್ದು, ಮುಸ್ಲಿಂ ಮತಗಳು ಇಬ್ಬಾಗ ಆಗುವುದಿಲ್ಲ </blockquote><span class="attribution">ಸಲೀಂ ಅಹಮ್ಮದ್, ಮುಖ್ಯ ಸಚೇತಕ, ವಿಧಾನಪರಿಷತ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>