<p><strong>ಚನ್ನಗಿರಿ:</strong> ‘ಕನ್ನಡ 2,000 ವರ್ಷಗಳ ಇತಿಹಾಸವನ್ನು ಹೊಂದಿರುವ ಶ್ರೀಮಂತ ಭಾಷೆ. ಇಂತಹ ಶ್ರೀಮಂತ ಭಾಷೆಗೆ ವಚನ ಸಾಹಿತ್ಯದ ಕೊಡುಗೆ ಅಪಾರವಾದದ್ದು’ ಎಂದು ನಿವೃತ್ತ ಜಂಟಿ ನಿರ್ದೇಶಕ ಎಚ್.ಕೆ. ಲಿಂಗರಾಜು ತಿಳಿಸಿದರು.</p>.<p>ಪಟ್ಟಣದ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದಿಂದ ಸೋಮವಾರ ನಡೆದ ದತ್ತಿ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಸಹಸ್ರಾರು ವಚನಗಳನ್ನು ರಚಿಸಿದರು. ಇಂತಹ ಅಮೂಲ್ಯವಾದ ವಚನಗಳನ್ನು ಸಂಶೋಧಿಸಿ, ಸಂರಕ್ಷಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಿದವರು ಫ.ಗು. ಹಳಕಟ್ಟಿ. ಹಳಕಟ್ಟಿ ಅವರಿಂದಾಗಿ ಇಂದಿಗೂ ಜನ ಸಾಮಾನ್ಯರಿಗೆ ವಚನಗಳು ಸಿಗುವಂತಾಗಿದೆ. ಸಮಾಜದಲ್ಲಿದ್ದ ಕಂದಾಚಾರ, ಮೂಢನಂಬಿಕೆ, ಅಂಧಶ್ರದ್ಧೆ ಮುಂತಾದ ಸಾಮಾಜಿಕ ಪಿಡುಗುಗಳನ್ನು ತೊಲಗಿಸಲು ಶಿವಶರಣರು ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದರು’ ಎಂದು ಹೇಳಿದರು.</p>.<p>‘ಕಾಯಕ ಮತ್ತು ದಾಸೋಹಕ್ಕೆ ಹೆಚ್ಚು ಒತ್ತು ಕೊಡಬೇಕು. ಹಾಗೆಯೇ ನಮ್ಮ ನಡೆ, ನುಡಿ ಸತ್ಯ ಶುದ್ಧವಾಗಿರಬೇಕು. ವಚನ ಸಾಹಿತ್ಯದ ಪ್ರಚಾರವನ್ನು ಶರಣ ಸಾಹಿತ್ಯ ಪರಿಷತ್ ನಾಡಿನಲ್ಲೆಡೆ ಮಾಡಿಕೊಂಡು ಬಂದಿದೆ ಎಂದರು.</p>.<p>ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ, ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಕೆ.ಎಚ್. ಷಣ್ಮುಖಪ್ಪ, ಐಕ್ಯೂಎಸಿ ಸಂಯೋಜಕ ಜಿ.ಎಸ್. ಸುರೇಶ್ ಉಪಸ್ಥಿತರಿದ್ದರು.</p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮಲ್ಲೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಪ್ರಾಂಶುಪಾಲ ರಮೇಶ್ ಐಯನಹಳ್ಳಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ‘ಕನ್ನಡ 2,000 ವರ್ಷಗಳ ಇತಿಹಾಸವನ್ನು ಹೊಂದಿರುವ ಶ್ರೀಮಂತ ಭಾಷೆ. ಇಂತಹ ಶ್ರೀಮಂತ ಭಾಷೆಗೆ ವಚನ ಸಾಹಿತ್ಯದ ಕೊಡುಗೆ ಅಪಾರವಾದದ್ದು’ ಎಂದು ನಿವೃತ್ತ ಜಂಟಿ ನಿರ್ದೇಶಕ ಎಚ್.ಕೆ. ಲಿಂಗರಾಜು ತಿಳಿಸಿದರು.</p>.<p>ಪಟ್ಟಣದ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದಿಂದ ಸೋಮವಾರ ನಡೆದ ದತ್ತಿ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಸಹಸ್ರಾರು ವಚನಗಳನ್ನು ರಚಿಸಿದರು. ಇಂತಹ ಅಮೂಲ್ಯವಾದ ವಚನಗಳನ್ನು ಸಂಶೋಧಿಸಿ, ಸಂರಕ್ಷಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಿದವರು ಫ.ಗು. ಹಳಕಟ್ಟಿ. ಹಳಕಟ್ಟಿ ಅವರಿಂದಾಗಿ ಇಂದಿಗೂ ಜನ ಸಾಮಾನ್ಯರಿಗೆ ವಚನಗಳು ಸಿಗುವಂತಾಗಿದೆ. ಸಮಾಜದಲ್ಲಿದ್ದ ಕಂದಾಚಾರ, ಮೂಢನಂಬಿಕೆ, ಅಂಧಶ್ರದ್ಧೆ ಮುಂತಾದ ಸಾಮಾಜಿಕ ಪಿಡುಗುಗಳನ್ನು ತೊಲಗಿಸಲು ಶಿವಶರಣರು ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದರು’ ಎಂದು ಹೇಳಿದರು.</p>.<p>‘ಕಾಯಕ ಮತ್ತು ದಾಸೋಹಕ್ಕೆ ಹೆಚ್ಚು ಒತ್ತು ಕೊಡಬೇಕು. ಹಾಗೆಯೇ ನಮ್ಮ ನಡೆ, ನುಡಿ ಸತ್ಯ ಶುದ್ಧವಾಗಿರಬೇಕು. ವಚನ ಸಾಹಿತ್ಯದ ಪ್ರಚಾರವನ್ನು ಶರಣ ಸಾಹಿತ್ಯ ಪರಿಷತ್ ನಾಡಿನಲ್ಲೆಡೆ ಮಾಡಿಕೊಂಡು ಬಂದಿದೆ ಎಂದರು.</p>.<p>ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ, ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಕೆ.ಎಚ್. ಷಣ್ಮುಖಪ್ಪ, ಐಕ್ಯೂಎಸಿ ಸಂಯೋಜಕ ಜಿ.ಎಸ್. ಸುರೇಶ್ ಉಪಸ್ಥಿತರಿದ್ದರು.</p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮಲ್ಲೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಪ್ರಾಂಶುಪಾಲ ರಮೇಶ್ ಐಯನಹಳ್ಳಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>