ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದವೀರಪ್ಪ ಬಡಾವಣೆಯಲ್ಲಿ ಮತಾಂತರದ ಆರೋಪ

Last Updated 5 ಏಪ್ರಿಲ್ 2021, 1:43 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಸಿದ್ದವೀರಪ್ಪ ಬಡಾವಣೆಯ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಾರ್ಥನಾ ಮಂದಿರದಲ್ಲಿ 40ರಿಂದ 50 ಮಂದಿ ಇದ್ದು, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಅಲ್ಲಿಗೆ ಭೇಟಿ ನೀಡಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಎರಡೂ ಧರ್ಮದವರ ನಡುವೆ ವಾಗ್ವಾದ ನಡೆದಿದ್ದು, ಈ ಕುರಿತ ವಿಡಿಯೊ
ಹರಿದಾಡಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದರು. ‘ಕೋವಿಡ್ ಸಂದರ್ಭವಾಗಿರುವುದರಿಂದ ಇಷ್ಟು ಜನರು ಸೇರುವ ಹಾಗಿಲ್ಲ. ಪರವಾನಗಿ ಇದೆಯಾ’ ಎಂದು ಪ್ರಶ್ನಿಸಿದರು.

ಅಲ್ಲಿದ್ದವರು ಸೋಮವಾರ ಪೊಲೀಸ್ ಠಾಣೆಗೆ ಬಂದು ದಾಖಲೆಗಳನ್ನು ನೀಡುವುದಾಗಿ ತಿಳಿಸಿದರು. ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT